ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು: ಎಂಬಿ ಪಾಟೀಲ್, ಸಚಿವ
ಬಿಜೆಪಿ ಹಲವಾರು ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು ಹೆಸರುಗಳನ್ನು ಈಗ ಬಹಿರಂಗಪಡಿಲಾಗದು ಎಂದು ಪಾಟೀಲ್ ಹೇಳಿದರು. ಗುರುವಾರ ಸಂತೋಷ್ ನಡೆಸಿದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ ಯಾಕೆ ಭಾಗಿಯಾಗಲಿಲ್ಲ ಅಂತ ಕೇಳಿದ ಪ್ರಶ್ನೆಗೆ ಅವರು, ಅದು ತನಗೆ ಹೇಗೆ ಗೊತ್ತಾಗಬೇಕು, ಸಂತೋಷ್ ಅವರನ್ನೇ ಕೇಳಬೇಕು ಎಂದು ಎಂಬಿ ಪಾಟೀಲ್ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ರಾಜ್ಯ ಬಿಜೆಪಿ ಮುಳುಗುತ್ತಿರುವ ಹಡಗಲ್ಲ, ಮುಳುಗಿರುವ ಹಡಗು ಎಂದು ಹೇಳಿದರು. ನಿನ್ನೆ ಬಿಎಲ್ ಸಂತೋಷ್ (BL Santosh), ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತನ್ನ ಸಂಪರ್ಕದಲ್ಲಿದ್ದಾರೆ ಅಂತ ಹೇಳಿರುವುದನ್ನು ಅಪಹಾಸ್ಯ ಮಾಡಿದ ಪಾಟೀಲ್, ತಮ್ಮ ಹಡಗು ಮುಳುಗುತ್ತಿದೆ ಅಂತ ಅವರಿಗೆ ಗೊತ್ತಿದೆ, ಡ್ಯಾಮೇಜ್ ಕಂಟ್ರೋಲ್ ಮಾಡುವುದಕ್ಕೋಸ್ಕರ ಅವರು ಹಾಗೆ ಹೇಳುತ್ತಿದ್ದಾರೆ ಎಂದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕನಿಷ್ಟ 15ರಿಂದ 20 ಸ್ಥಾನ ಗೆಲ್ಲಲಿದೆ ಎಂದು ಅವರು ಹೇಳಿದರು. ಬಿಜೆಪಿ ಹಲವಾರು ನಾಯಕರು ಕಾಂಗ್ರೆಸ್ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ, ಅವರು ಹೆಸರುಗಳನ್ನು ಈಗ ಬಹಿರಂಗಪಡಿಲಾಗದು ಎಂದು ಪಾಟೀಲ್ ಹೇಳಿದರು. ಗುರುವಾರ ಸಂತೋಷ್ ನಡೆಸಿದ ಸಭೆಯಲ್ಲಿ ಬಿಎಸ್ ಯಡಿಯೂರಪ್ಪ (BS Yediyurappa) ಯಾಕೆ ಭಾಗಿಯಾಗಲಿಲ್ಲ ಅಂತ ಕೇಳಿದ ಪ್ರಶ್ನೆಗೆ ಅವರು, ಅದು ತನಗೆ ಹೇಗೆ ಗೊತ್ತಾಗಬೇಕು, ಸಂತೋಷ್ ಅವರನ್ನೇ ಕೇಳಬೇಕು ಎಂದು ಎಂಬಿ ಪಾಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

