ಬೆಳಗಾವಿ ಅಧಿವೇಶನದ ಬಳಿಕ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ: ನಳಿನ್ ಕುಮಾರ್ ಕಟೀಲ್, ಸಂಸದ

Updated on: Nov 21, 2023 | 7:42 PM

ಹಸ್ತದೊಳಗೆ ಹಸ್ತ ಆಪರೇಶನ್ ನಡೆದಿದೆ ಎಂದು ಹೇಳಿದರು. ಸುಮಾರು 30-40 ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೊರಬರಲಿದ್ದಾರೆ, ಅದು ಅವರಿಗೆ ಗೊತ್ತಿರುವುದರಿಂದ ಬಿಜೆಪಿ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅಂತ ಬಟ್ಟೆ ಹಾವು ಬಿಡುತ್ತಾರೆ, ಬೆಳಗಾವಿ ಆಧಿವೇಶನದ ನಂತರ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ಬಿವೈ ವಿಜಯೇಂದ್ರ ಅವರಿಗೆ ವಹಿಸಿಕೊಟ್ಟ ಬಳಿಕ ಕೊಂಚ ನಿರಾಳರಾದಂತೆ ಕಾಣುವ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ವಿಜಯೇಂದ್ರ ರಾಜ್ಯಾಧ್ಯಕ್ಷನ ಮಾಡಿರುವ ಕಾರಣ ಕೆಲ ಹಿರಿಯ ನಾಯಕರು ಪಕ್ಷ ತೊರೆಯಲಿರುವ ಬಗ್ಗೆ ಹರಡಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರು ಸುಖಾಸುಮ್ಮನೆ ವದಂತಿ ಹರಡುತ್ತಿದ್ದಾರೆ. ಅಸಲಿಗೆ ಅವರ ಪಕ್ಷವೇ ಸಿದ್ದರಾಮಯ್ಯ (Siddaramaiah) ಬಣ, ಶಿವಕುಮಾರ್ (Shivakumar) ಬಣ, ಸತೀಶ್ ಬಣ ಅಂತ ಒಡೆದ ಮನೆಯಾಗಿದೆ. ಮತ್ತೊಂದೆಡೆ ಪ್ರಿಯಾಂಕ್ ಖರ್ಗೆ ನಾನು ಸಿಎಂ ಆಗ್ತೀನಿ ಅಂತಿದ್ದಾರೆ. ಹಸ್ತದೊಳಗೆ ಹಸ್ತ ಆಪರೇಶನ್ ನಡೆದಿದೆ ಎಂದು ಹೇಳಿದರು. ಸುಮಾರು 30-40 ಕಾಂಗ್ರೆಸ್ ಶಾಸಕರು ಪಕ್ಷ ಬಿಟ್ಟು ಹೊರಬರಲಿದ್ದಾರೆ, ಅದು ಅವರಿಗೆ ಗೊತ್ತಿರುವುದರಿಂದ ಬಿಜೆಪಿ ಶಾಸಕರು ಮತ್ತು ನಾಯಕರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಅಂತ ಬಟ್ಟೆ ಹಾವು ಬಿಡುತ್ತಾರೆ, ಬೆಳಗಾವಿ ಆಧಿವೇಶನದ ನಂತರ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಪರಿವರ್ತನೆಯಾಗಲಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More