AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yuva Brigade; ವೇಣುಗೋಪಾಲ್ ಪತ್ನಿಗೆ ರೂ. 25 ಲಕ್ಷ ಪರಿಹಾರ ಮತ್ತು ಸರ್ಕಾರೀ ಕೆಲಸವನ್ನು ಸರ್ಕಾರ ನೀಡಬೇಕು: ಡಾ ಸಿಎನ್ ಅಶ್ವಥ್ ನಾರಾಯಣ

Yuva Brigade; ವೇಣುಗೋಪಾಲ್ ಪತ್ನಿಗೆ ರೂ. 25 ಲಕ್ಷ ಪರಿಹಾರ ಮತ್ತು ಸರ್ಕಾರೀ ಕೆಲಸವನ್ನು ಸರ್ಕಾರ ನೀಡಬೇಕು: ಡಾ ಸಿಎನ್ ಅಶ್ವಥ್ ನಾರಾಯಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Jul 11, 2023 | 6:17 PM

Share

ಸರ್ಕಾರ ನಿಷ್ಪಕ್ಷವಾದ ನಡೆಸಿ ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಗಲ್ಲು ಶಿಕ್ಷೆ ವಿಧಿಸವಂಥ ಕೆಲಸ ಆಗಬೇಕು ಎಂದ ಬಿಜೆಪಿ ಶಾಸಕ ಸಿಎನ್ ಆಶ್ವಥ್ ನಾರಾಯಣ ಹೇಳಿದರು.

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ (Venugopal murder) ಒಂದು ಪೂರ್ವನಿಯೋಜಿತ ಕೃತ್ಯ, ಬರ್ಬರ ಹತ್ಯೆಯಲ್ಲಿ ಭಾಗಿಯಾಗಿರುವ ಪ್ರಭಾವಿ ವ್ಯಕ್ತಿಗಳನ್ನು (influential people) ಉಳಿಸಲು ಪ್ರಕರಣವನ್ನು ಹತ್ತಿಕ್ಕುವ ಕೆಲಸಗಳು ನಡೆಯುತ್ತಿವೆ, ಸರ್ಕಾರ ನಿಷ್ಪಕ್ಷವಾದ ನಡೆಸಿ ತಪ್ಪಿತಸ್ಥರು ಯಾರೇ ಆಗಿರಲಿ ಅವರಿಗೆ ಗಲ್ಲು ಶಿಕ್ಷೆ ವಿಧಿಸವಂಥ ಕೆಲಸ ಆಗಬೇಕು ಎಂದ ಬಿಜೆಪಿ ಶಾಸಕ ಸಿಎನ್ ಆಶ್ವಥ್ ನಾರಾಯಣ (Dr CN Ashwath Narayan) ಹೇಳಿದರು. ವೇಣುಗೋಪಾಲ್ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಸಚಿವ, ಹತ್ಯೆಗೀಡಾದ ವ್ಯಕ್ತಿ ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದರಿಂದ ಅವನ ಹೆಂಡತಿಗೆ ಒಂದು ಸರ್ಕಾರೀ ಕೆಲಸ ನೀಡಬೇಕು ಮತ್ತು ರೂ. 25 ಲಕ್ಷ ಕುಟುಂಬಕ್ಕೆ ಪರಿಹಾರ ಧನವಾಗಿ ನೀಡಬೇಕೆಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More