ಕೇರಳದಲ್ಲಿ ಆನೆ ತುಳಿತಕ್ಕೆ ಬಲಿಯಾದವನಿಗೆ ರೂ. 15 ಲಕ್ಷ, ಬರದಿಂದ ತತ್ತರಿಸಿರುವ ರಾಜ್ಯದ ರೈತನಿಗೆ ರೂ. 2,000! ಹೆಚ್ ಡಿ ಕುಮಾರಸ್ವಾಮಿ

Updated on: Feb 21, 2024 | 10:44 AM

ರಾಜ್ಯದಲ್ಲಿ ಯಾರಾದರೂ ವನ್ಯಜೀವಿಗಳ ದಾಳಿಗೆ ಬಲಿಯಾದರೆ ರಾಜ್ಯ ಸರ್ಕಾರ 25,000, 50,000, ಗರಿಷ್ಠ ರೂ. 5 ಲಕ್ಷದವರೆಗೆ ಪರಿಹಾರ ನೀಡುತ್ತದೆ. ಮಾನವೀಯತೆಯ ಹೆಸರಲ್ಲಿ ಮತ್ತು 5 ಗ್ಯಾರಂಟಿಗಳ ನೆಪದಲ್ಲಿ ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಬೆಂಗಳೂರು: ಕೇರಳದಲ್ಲಿ ಆನೆ ತುಳಿತಕ್ಕೊಳಗಾಗಿ ಮೃತಪಟ್ಟ ವ್ಯಕ್ತಿಯೊಬ್ಬನ ಕುಟುಂಬಕ್ಕೆ ಕರ್ನಾಟಕ ಸರ್ಕಾರ (Government of Karnataka) 15 ಲಕ್ಷ ರೂ. ಪರಿಹಾರ ಕೊಟ್ಟಿರುವುದನ್ನು ಜೆಡಿಎಸ್ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಲವಾಗಿ ಖಂಡಿಸಿದರು. ನಗರದ ತಮ್ಮ ಕಚೇರಿಯಲ್ಲಿ ಇಂದು ಟಿವಿ9 ಕನ್ನಡವಾಹಿನಿ ವರದಿಗಾರನೊಂದಿಗೆ ಮಾತಾಡಿದ ಕುಮಾರಸ್ವಾಮಿ, ನಮ್ನ ತೆರಿಗೆ ನಮ್ಮ ಹಕ್ಕು (MY Tax My Right) ಹೇಳುತ್ತಾ ದೆಹಲಿಗೆ ಹೋಗಿ ನಾಟಕ ಮಾಡುವ ರಾಜ್ಯ ಸರ್ಕಾರ ಕನ್ನಡಿಗರ ತೆರಿಗೆ ಹಣವನ್ನು ಸ್ವೇಚ್ಛೆಯಾಗಿ ಖರ್ಚು ಮಾಡುತ್ತಿದೆ, ದೆಹಲಿಯಲ್ಲಿರುವ ತಮ್ಮ ನಾಯಕರ ಅಣತಿಯಂತೆ ಮತ್ತು ಮುಂಬರುವ ಲೋಕ ಸಭಾ ಚುನಾವನಣೆಯಲ್ಲಿ ವೋಟು ಗಿಟ್ಟಿಸಲು ಹಣ ಖರ್ಚು ಮಾಡುತ್ತಿರುವುದು ಖಂಡನೀಯ ಎಂದು ಹೇಳಿದರು. ಬರದಿಂದ ತತ್ತರಿಸಿರುವ ರಾಜ್ಯದ ರೈತನಿಗೆ ಸರ್ಕಾರ ಕೇವಲ ರೂ. 2,000 ಅದರಲ್ಲೂ ಶೇಕಡ 75 ಕೇಂದ್ರದ ಹಣ-ನೀಡುತ್ತದೆ, ಮತ್ತು ರಾಜ್ಯದಲ್ಲಿ ಯಾರಾದರೂ ವನ್ಯಜೀವಿಗಳ ದಾಳಿಗೆ ಬಲಿಯಾದರೆ, 25,000, 50,000, ಗರಿಷ್ಠ ರೂ. 5 ಲಕ್ಷದವರೆಗೆ ಪರಿಹಾರ ನೀಡುತ್ತದೆ. ಮಾನವೀಯತೆಯ ಹೆಸರಲ್ಲಿ ಮತ್ತು 5 ಗ್ಯಾರಂಟಿಗಳ ನೆಪದಲ್ಲಿ ಸಿದ್ದರಾಮಯ್ಯ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More