AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಗೆ ನೂತನ ಆಯುಕ್ತರ ನೇಮಕ: ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ

[lazy-load-videos-and-sticky-control id=”17vBFi1RN88″] ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿದೆ. ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ […]

BBMPಗೆ ನೂತನ ಆಯುಕ್ತರ ನೇಮಕ: ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ
ಸಾಧು ಶ್ರೀನಾಥ್​
|

Updated on:Jul 18, 2020 | 3:55 PM

Share

[lazy-load-videos-and-sticky-control id=”17vBFi1RN88″]

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿದೆ.

ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ರವರನ್ನು ನೂತನ ಬಿಬಿಎಂಪಿ ಆಯುಕ್ತರಾಗಿ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ ನೀಡಿರುವ ಸರ್ಕಾರದ ನಡೆ ತೀವ್ರ ಕುತೂಹಲ ಉಂಟುಮಾಡಿದೆ.

ಆರಂಭದಲ್ಲಿ ಬಿಬಿಎಂಪಿ ಆಯುಕ್ತ ಹುದ್ದೆಯನ್ನು ಬಿ.ಎಚ್. ಅನಿಲ್ ಕುಮಾರ್ ರವರಿಗೆ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಮಂಜುನಾಥ್ ಪ್ರಸಾದ್ ರವರಿಗೆ, ಹಾಗೂ ವಿಪತ್ತು‌ ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಟಿ.ಕೆ.‌ ಅನಿಲ್ ಕುಮಾರ್ ರವರಿಗೆ ರಾಜ್ಯ ಸರ್ಕಾರ ನೀಡಿತ್ತು. ನಂತರದ ದಿನಗಳಲ್ಲಿ ಮಂಜುನಾಥ್ ಪ್ರಸಾದ್ ರವರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ವಿಪತ್ತು‌ ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಬ್ದಾರಿಯನ್ನು ಹೊರಿಸಿತ್ತು. ಈಗ ಈ ಎರಡು ಹುದ್ದೆಗಳ ಜೊತೆಗೆ ಬಿಬಿಎಂಪಿ ಆಯುಕ್ತರನ್ನಾಗಿ ಮಂಜುನಾಥ್ ಪ್ರಸಾದ್ ರವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Published On - 1:32 pm, Sat, 18 July 20

ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ