AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMPಗೆ ನೂತನ ಆಯುಕ್ತರ ನೇಮಕ: ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ

[lazy-load-videos-and-sticky-control id=”17vBFi1RN88″] ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿದೆ. ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ […]

BBMPಗೆ ನೂತನ ಆಯುಕ್ತರ ನೇಮಕ: ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ
ಸಾಧು ಶ್ರೀನಾಥ್​
|

Updated on:Jul 18, 2020 | 3:55 PM

Share

[lazy-load-videos-and-sticky-control id=”17vBFi1RN88″]

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೆ ಇದ್ದು, ಕೊರೊನಾ ನಿಯಂತ್ರಣಕ್ಕೆ ತರುವಲ್ಲಿ ಬೆಂಗಳೂರು ಮಹಾನಗರ ಪಾಲಿಕೆ ಸಂಪೂರ್ಣ ವಿಫಲವಾಗಿದೆ. ಇದರಿಂದ ರಾಜ್ಯ ಸರ್ಕಾರ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡುವ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಂಡಿದೆ.

ಬೆಂಗಳೂರಲ್ಲಿ ಕೋವಿಡ್ ನಿರ್ವಹಣಾ ವಿಚಾರದಲ್ಲಿ ವ್ಯತ್ಯಾಸ ಕಂಡು ಬಂದ ಕಾರಣಕ್ಕೆ ಕೊವಿಡ್ ಟಾಸ್ಕ್ ಪೋರ್ಸ್ ಮುಖ್ಯಸ್ಥ ಹಾಗೂ ಆಯುಕ್ತರಾಗಿರುವ ಅನಿಲ್ ಕುಮಾರ್​ರನ್ನ ವರ್ಗಾವಣೆ ಮಾಡಿ ಅವರ ಜಾಗಕ್ಕೆ ಹಾಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿರುವ ಮಂಜುನಾಥ್ ಪ್ರಸಾದ್ ರವರನ್ನು ನೂತನ ಬಿಬಿಎಂಪಿ ಆಯುಕ್ತರಾಗಿ ನೇಮಕಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಕೊರೋನಾ ಸಂಕಷ್ಟದಲ್ಲಿ ಒಂದೇ ಅಧಿಕಾರಿಗೆ 3 ಜವಾಬ್ದಾರಿ ನೀಡಿರುವ ಸರ್ಕಾರದ ನಡೆ ತೀವ್ರ ಕುತೂಹಲ ಉಂಟುಮಾಡಿದೆ.

ಆರಂಭದಲ್ಲಿ ಬಿಬಿಎಂಪಿ ಆಯುಕ್ತ ಹುದ್ದೆಯನ್ನು ಬಿ.ಎಚ್. ಅನಿಲ್ ಕುಮಾರ್ ರವರಿಗೆ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಮಂಜುನಾಥ್ ಪ್ರಸಾದ್ ರವರಿಗೆ, ಹಾಗೂ ವಿಪತ್ತು‌ ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಟಿ.ಕೆ.‌ ಅನಿಲ್ ಕುಮಾರ್ ರವರಿಗೆ ರಾಜ್ಯ ಸರ್ಕಾರ ನೀಡಿತ್ತು. ನಂತರದ ದಿನಗಳಲ್ಲಿ ಮಂಜುನಾಥ್ ಪ್ರಸಾದ್ ರವರಿಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜೊತೆಗೆ ವಿಪತ್ತು‌ ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಯ ಜವಬ್ದಾರಿಯನ್ನು ಹೊರಿಸಿತ್ತು. ಈಗ ಈ ಎರಡು ಹುದ್ದೆಗಳ ಜೊತೆಗೆ ಬಿಬಿಎಂಪಿ ಆಯುಕ್ತರನ್ನಾಗಿ ಮಂಜುನಾಥ್ ಪ್ರಸಾದ್ ರವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Published On - 1:32 pm, Sat, 18 July 20

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್