Finish Siddaramaiah Comment: ಡಾ ಅಶ್ವಥ್ ನಾರಾಯಣ ವಿರುದ್ಧ ರಾಜ್ಯದ ಐಜಿ ಸುಮೋಟು ಕೇಸ್ ದಾಖಲಿಸಿಕೊಂಡು ಜೈಲಿಗಟ್ಟಬೇಕು: ಸಿಎಮ್ ಇಬ್ರಾಹಿಂ

ಅರುಣ್​ ಕುಮಾರ್​ ಬೆಳ್ಳಿ

Updated on: Feb 16, 2023 | 2:12 PM

ಅಶ್ವಥ್ ನಾರಾಯಣ ನೀಡಿರೋದು ಶಾಂತಿ ಕದಡುವ ಹೇಳಿಕೆಯಾಗಿರುವುದರಿಂದ ರಾಜ್ಯ ಐಜಿ ಅವರು ಕೂಡಲೇ ಅವರ ವಿರುದ್ಧ ಸುಮೋಟು ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಹಾಕಬೇಕು ಎಂದು ಇಬ್ರಾಹಿಂ ಹೇಳಿದರು.

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರು ಸಿದ್ದರಾಮಯ್ಯನವರು (Siddaramaiah) ಬಗ್ಗೆ ಮಾಡಿರುವ ಕಾಮೆಂಟನ್ನು ಪಕ್ಷಾತೀತವಾಗಿ ಖಂಡಿಸಲಾಗುತ್ತಿದೆ. ನಗರದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಮ್ ಇಬ್ರಾಹಿಂ (CM Ibrahim) ಅವರು ಸಚಿವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರೂ ಟಿಪ್ಪು ಸುಲ್ತಾನ್ ಗುಣಗಾನ ಮಾಡಿದ್ದಾರೆ, ಅವರನ್ನೂ ಈ ಬಿಜೆಪಿಯ ಹುಚ್ಚುಮುಂಡೇ ಗಿರಾಕಿ ಮುಗಿಸುತ್ತಾನಾ? ಅಂತ ಪ್ರಶ್ನಿಸಿದರು. ಅಶ್ವಥ್ ನಾರಾಯಣ ನೀಡಿರೋದು ಶಾಂತಿ ಕದಡುವ ಹೇಳಿಕೆಯಾಗಿರುವುದರಿಂದ ರಾಜ್ಯ ಐಜಿ ಅವರು ಕೂಡಲೇ ಅವರ ವಿರುದ್ಧ ಸುಮೋಟು ಪ್ರಕರಣ ದಾಖಲಿಸಿಕೊಂಡು ಜೈಲಿಗೆ ಹಾಕಬೇಕು ಎಂದು ಇಬ್ರಾಹಿಂ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.