ಎಲ್ಲ ವಿಚಾರಗಳನ್ನು ಪಕ್ಷದ 4 ಗೋಡೆಗಳೊಳಗೆ ಮಾತ್ರ ಚರ್ಚಿಸಬೇಕೆಂದು ಉಸ್ತುವಾರಿ ಸೂಚಿಸಿದ್ದಾರೆ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Feb 07, 2025 | 3:12 PM

ರಾಜ್ಯದ ಬಿಜೆಪಿ ನಾಯಕರೆಲ್ಲ ಒಗ್ಗೂಡಿದರೆ ಆಡಳಿತ ನಡೆಸುತ್ತಿರುವ ಭ್ರಷ್ಟ, ಹಗರಣಗಳಿಂದ ಆವರಿಸಿಕೊಂಡಿರುವ, 60 ಪರ್ಸೆಂಟ್ ಕಾಂಗ್ರೆಸ್ ಸರ್ಕಾರವನ್ನು ಬಗ್ಗು ಬಡಿಯಬಹುದು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ವಾಕ್ ಸ್ವಾತಂತ್ರ್ಯ ಎಲ್ಲರಿಗೂ ಇರುವುದರಿಂದ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸುತ್ತಾರೆ, ಇದನ್ನು ಆರಂಭದಲ್ಲ್ಲೇ ನಿಲ್ಲಿಸಬೇಕಿತ್ತು, ರೆಡ್ಡಿಯವರು ಹೇಳಿದ್ದನ್ನು ಎಲ್ಲರೂ ಪಾಲಿಸುತ್ತೇವೆ ಎಂದು ಅಶೋಕ ಹೇಳಿದರು.

ಬೆಂಗಳೂರು: ಕರ್ನಾಟಕದ ಬಿಜೆಪಿ ಸಹ-ಉಸ್ತುವಾರಿ ಸುಧಾಕರ್ ರೆಡ್ಡಿ ಅವರು ರಾಜ್ಯ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದ ಬಳಿಕ ವಿರೋಧ ಪಕ್ಷದ ನಾಯಕ ಅರ್ ಅಶೋಕ್ ಮಾಧ್ಯಮಗಳ ಜೊತೆ ಮಾತಾಡಿದರು. ಪಕ್ಷದ ಯಾವುದೇ ಮುಖಂಡ, ಕಾರ್ಯಕರ್ತ ಆಂತರಿಕ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಮಾತಾಡುವಂತಿಲ್ಲ, ತಮ್ಮ ದೂರು ದುಮ್ಮಾನಗಳನ್ನು ಪಕ್ಷದ ನಾಲ್ಕು ಗೋಡೆಗಳ ನಡುವೆ ಮಾತ್ರ ಹೇಳಿಕೊಳ್ಳಬೇಕು ಎಂದು ಉಸ್ತುವಾರಿ ರೆಡ್ಡಿಯವರು ಎಲ್ಲರಿಗೂ ಸ್ಪಷ್ಟವಾದ ಸೂಚನೆ ನೀಡಿದ್ದಾರೆ, ಇದು ತನ್ನ ಮತ್ತು ಕೇಂದ್ರದ ವರಿಷ್ಠರ ಅನಿಸಿಕೆಯೂ ಆಗಿದೆ ಅಂತ ಅಶೋಕ ಹೇಳಿದರು. ಬಿಜೆಪಿಯಲ್ಲಿ ಇಂಥ ವಿದ್ಯಮಾನ ನಡೆಯಬಾರದಿತ್ತು, ಅದರೆ ದುರದೃಷ್ಟವಶಾತ್ ನಡೆದು ಹೋಗಿದೆ, ಇನ್ನೆರಡು ವಾರಗಳ ಅವಧಿಯಲ್ಲಿ ಎಲ್ಲವೂ ಸರಿಹೋಗಲಿದೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ಕೈ’ಯಲ್ಲಿ ಕಂಪನ ಎಬ್ಬಿಸಿದ ಅಶೋಕ್ ಭವಿಷ್ಯ: ಕಾಂಗ್ರೆಸ್ ನಾಯಕರಿಂದ ವಾಗ್ದಾಳಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.