ಬೆಂಗಳೂರಿಗೆ ಹೊಸ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ಕೇಂದ್ರ ಸಚಿವ ವಿ ಸೋಮಣ್ಣ

ಮುಂದಿನ ವರ್ಷಗಳಲ್ಲಿ ಬೆಂಗಳೂರು ಮತ್ತು ಸುತ್ತಮುತ್ತ ಗ್ರಾಮಗಳ ಜನಸಂಖ್ಯೆಯು 1.40 ಕೋಟಿ ದಾಟಲಿದ್ದು ಹೊಸ ಹೊಸ ಸಂಪರ್ಕ ವ್ಯವಸ್ಥೆಯನ್ನು ಜಾರಿಗೊಳಿಸುವ ಅವಶ್ಯಕತೆಯಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಹೇಳಿದರು. ರೇಲ್ವೆ ಇಲಾಖೆಗೆ ಈಗಷ್ಟೇ ಮಂತ್ರಿಯಾಗಿರುವುದರಿಂದ ಹೆಚ್ಚಿನ ಪ್ರಶ್ನೆ ಕೇಳಬೇಡಿ, ಮುಂದಿನ ಸಲ ಬಂದಾಗ ತಯಾರಿ ಮಾಡಿಕೊಂಡು ಬರುತ್ತೇನೆ ಎಂದು ಹೇಳಿ ಸೋಮಣ್ಣ ಪ್ರಾಮಾಣಿಕತೆಯನ್ನು ಮೆರೆದರು.

ಬೆಂಗಳೂರಿಗೆ ಹೊಸ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ಕೇಂದ್ರ ಸಚಿವ ವಿ ಸೋಮಣ್ಣ
|

Updated on:Jun 29, 2024 | 6:48 PM

ಬೆಂಗಳೂರು: ನಗರದ ಖಾಸಗಿ ಹೋಟೆಲೊಂದರಲ್ಲಿ ಇಂದು ಮಹತ್ತರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಅಯೋಜಿಸಿ ಮಾತಾಡಿದ ಕೇಂದ್ರ ರೇಲ್ವೇ ಖಾತೆಯ ರಾಜ್ಯ ಸಚಿವ ವಿ ಸೋಮಣ್ಣ ಅವರು ರಾಜ್ಯಕ್ಕೆ ಅದರಲ್ಲೂ ವಿಶೇಷವಾಗಿ ಬೆಂಗಳೂರಿಗೆ ಒಂದು ಹೊಸ ರೇಲ್ವೇ ಯೋಜನೆಯನ್ನು ಘೋಷಿಸಿದರು. ಸಬ್-ಅರ್ಬನ್ ರೈಲುಯೋಜನೆ ಹೊರತಾಗಿ ಅದರಿಂದ 10 ಕೀಮೀ ದೂರದ ಅಂತರದಲ್ಲಿ ಹೊಸ ಸರ್ಕ್ಯೂಲರ್ ರೇಲ್ವೇ ಯೋಜನೆಗಾಗಿ ನೀಲಿನಕ್ಷೆ ತಯಾರಿಸಲಾಗುತ್ತಿದೆ ಎಂದು ಸೋಮಣ್ಣ ಹೇಳಿದರು. ಇದು 287 ಕಿಮೀ ಉದ್ದದ ರೈಲು ಯೋಜನೆಯಾಗಿದ್ದು ವಡ್ಡರಹಳ್ಳಿ, ದೇವನಹಳ್ಳಿ, ಮಾಲೂರು, ಕೋಳೂರು ಮಾರ್ಗವಾಗಿ ಚಲಿಸುತ್ತ ಬೆಂಗಳೂರು ನಗರದ ಪ್ರಮುಖ ರಸ್ತೆ ಮತ್ತು ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಲಿದೆ ಎಂದು ಸಚಿವರ ಹೇಳಿದರು. ಸರ್ಕ್ಯೂಲರ್ ರೈಲು ಯೋಜನೆಗೆ ಸುಮಾರು ರೂ. 23,000 ಕೋಟಿ ವೆಚ್ಚ ತಗುಲಲಿದ್ದು ಅದನ್ನು ಕೇಂದ್ರ ಸರ್ಕಾರವೇ ಭರಿಸಲಿದೆ, ಭೂಮಿ ಒದಗಿಸುವ ಹೊಣೆಗಾರಿಕೆ ಮಾತ್ರ ರಾಜ್ಯ ಸರ್ಕಾರದ ಮೇಲಿರುತ್ತದೆ ಎಂದು ಸೋಮಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ತುಮಕೂರು ಲೋಕಸಭಾ ಚುನಾವಣೆ 2024 ಫಲಿತಾಂಶ: ವಿ ಸೋಮಣ್ಣ ಗೆಲುವು, ರಾಜ್ಯದಿಂದ ರಾಷ್ಟ್ರ ರಾಜಕಾರಣದತ್ತ

Published On - 6:48 pm, Sat, 29 June 24

Follow us
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ರಕ್ಷಿತ್ ಶೆಟ್ಟಿ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ
ಕಾರಲ್ಲಿ ಬಂದು ಪಾಟ್ ಕದಿಯುವ ಕಪಲ್ಸ್; ಸಿಸಿ ಟಿವಿಯಲ್ಲಿ ಸೆರೆ