ಹರಿಪ್ರಸಾದ್ ಮಾತು ಒಬ್ಬ ಪ್ರಬುದ್ಧ ರಾಜಕಾರಣಿಗೆ ಶೋಭೆ ನೀಡುವುದಿಲ್ಲ: ದಿನೇಶ್ ಗುಂಡೂರಾವ್

ಅವರ ಬಗ್ಗೆ ಈಗಾಗಲೇ ಹೈ ಕಮಾಂಡ್ ಗೆ ದೂರು ಹೋಗಿದೆ ಮತ್ತು ವರಿಷ್ಠರು ಹಾಗೆ ಮಾತಾಡದಂತೆ ತಾಕೀತು ಕೂಡ ಮಾಡಿದೆ ಅಂತ ಸಚಿವ ಹೇಳಿದರು. ಯಾಕೆ ಹರಿಪ್ರಸಾದ್ ಅವರಿಗೆ ಆ ಪರಿ ಅಸಮಾಧಾನ ಅಂತ ಮಾಧ್ಯಮದವರು ಕೇಳಿದರೆ, ಅದನ್ನು ಅವರಿಂದಲೇ ತಿಳಿದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಹರಿಪ್ರಸಾದ್ ಮಾತು ಒಬ್ಬ ಪ್ರಬುದ್ಧ ರಾಜಕಾರಣಿಗೆ ಶೋಭೆ ನೀಡುವುದಿಲ್ಲ: ದಿನೇಶ್ ಗುಂಡೂರಾವ್
|

Updated on: Sep 11, 2023 | 7:02 PM

ಮಂಗಳೂರು: ಬಿಕೆ ಹರಿಪ್ರಸಾದ್ (BK Hariprasad) ರಾಜ್ಯ ಕಾಂಗ್ರೆಸ್ ಹಗೆ ಮಗ್ಗುಲ ಮುಳ್ಳಾಗಿ ಪರಿಣಮಿಸಿದ್ದಾರೆಯೇ? ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ನಗರದಲ್ಲಿಂದು ಪತ್ರಿಕಾ ಗೋಷ್ಟಿಯಲ್ಲಿ ಮಾತಾಡಿದದ್ದು ಕೇಳಿದರೆ ಹೌದೆನಿಸುತ್ತದೆ. ಪ್ರಾಯಶಃ ದಿನೇಶ್ ಅವರು ಹರಿಪ್ರಸಾದ್ ಬೇರೆ ಬೇರೆ ವೇದಿಕೆಗಳಲ್ಲಿ ಆಡಿರುವ ಸಿದ್ದರಾಮಯ್ಯ-ವಿರೋಧಿ (anti Siddaramaiah) ಮಾತುಗಳನ್ನು ಖಂಡಿಸಿರುವ ರಾಜ್ಯ ಕಾಂಗ್ರೆಸ್ ನ ಮೊದಲ ನಾಯಕರಾಗಿದ್ದಾರೆ. ಹರಿಪ್ರಸಾದ್ ಯಾರ ಬಗ್ಗೆ ಮಾತಾಡಿದ್ದಾರೋ ಅರ್ಥವಾಗುತ್ತಿಲ್ಲ, ಒಬ್ಬ ಹಿರಿಯ ಮತ್ತು ಪ್ರಬುದ್ಧ ರಾಜಕಾರಣಿಯಾಗಿದ್ದಾರೆ, ಹಾಗೆ ಮಾತಾಡುವುದು ಅವರಿಗೆ ಶೋಭೆ ನೀಡುವುದಿಲ್ಲ. ಅವರು ಹಾಗೆ ಮಾತಾಡಿದ್ದು ಪಕ್ಷ ಮತ್ತು ಪಕ್ಷದ ನಾಯಕರಿಗಿಂತ ಖುದ್ದು ಅವರಿಗೆ ಹೆಚ್ಚು ಹಾನಿಯನ್ನುಂಟು ಮಾಡಿದೆ ಎಂದು ದಿನೇಶ್ ಹೇಳಿದರು. ಅವರ ಬಗ್ಗೆ ಈಗಾಗಲೇ ಹೈ ಕಮಾಂಡ್ ಗೆ ದೂರು ಹೋಗಿದೆ ಮತ್ತು ವರಿಷ್ಠರು ಹಾಗೆ ಮಾತಾಡದಂತೆ ತಾಕೀತು ಕೂಡ ಮಾಡಿದೆ ಅಂತ ಸಚಿವ ಹೇಳಿದರು. ಯಾಕೆ ಹರಿಪ್ರಸಾದ್ ಅವರಿಗೆ ಆ ಪರಿ ಅಸಮಾಧಾನ ಅಂತ ಮಾಧ್ಯಮದವರು ಕೇಳಿದರೆ, ಅದನ್ನು ಅವರಿಂದಲೇ ತಿಳಿದುಕೊಳ್ಳಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್