ಮನೆ ಮೇಲಿಂದ ಮಗುವನ್ನು ತಳ್ಳಿದ ಮಲತಾಯಿ: ಬಿದ್ದು ಒದ್ದಾಡಿ ಪ್ರಾಣ ಬಿಟ್ಟ ಸಾನ್ವಿ, ವಿಡಿಯೋ ಕರುಳು ಚುರುಕ್ ಅನ್ನುತ್ತೆ

Edited By:

Updated on: Sep 16, 2025 | 6:24 PM

ತಂದೆಗೆ ಎರಡನೇ ಹೆಂಡ್ತಿಯಾದವಳು, ಪುಟ್ಟ ಬಾಲಕಿಗೆ ತಾಯಿ ಆಗ್ತೀನಿ ಎಂದು ಬಂದಿದ್ದ ಮಲತಾಯಿ ರಾಕ್ಷಸಿಯಾಗ್ಬಿಟ್ಟಿದ್ದಾಳೆ. ಬಿಲ್ಡಿಂಗ್‌ನಿಂದ ಬಿದ್ದು ಮೊಮ್ಮಗಳು ಜೀವ ಬಿಟ್ಟಳು ಅಂದುಕೊಂಡಿದ್ದ ಅಜ್ಜಿಗೆ ಮಲತಾಯಿಯ ಕ್ರೌರ್ಯವನ್ನ ಸಿಸಿಟಿವಿ ಬಿಚ್ಚಿಟ್ಟಿದೆ. ಹೌದು..ತಾಯಿ ಸ್ಥಾನ ತುಂಬುತ್ತೀನಿ ಅಂತ ಬಂದಿದ್ದ ಮಲತಾಯಿಯೇ ಬಾಲಕಿ ಜೀವವನ್ನ ಬಲಿ ಪಡೆದಿದ್ದಾಳೆ. 3ನೇ ಮಹಡಿಯಿಂದ 7 ವರ್ಷದ ಶಾನವಿಯನ್ನ ತಳ್ಳಿ ಮಲತಾಯಿ ರಾಧಾ ಹತ್ಯೆಗೈದಿರುವ ಘಟನೆ ಬೀದರ್‌ನ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಮಲತಾಯಿ ತಳ್ಳಿದ್ದರಿಂದ ಕೆಳಗೆ ಬಿದ್ದ ಸಾನ್ವಿ, ಅಲ್ಲಿಂದ ನಡೆದುಕೊಂಡು ರಸ್ತೆಗೆ ಬಂದು ಒದ್ದಾಡಿ ಜೀವಬಿಟ್ಟಿದ್ದಾಳೆ.

ಬೀದರ್, ಸೆಪ್ಟೆಂಬರ್ 16): ತಂದೆಗೆ ಎರಡನೇ ಹೆಂಡ್ತಿಯಾದವಳು, ಪುಟ್ಟ ಬಾಲಕಿಗೆ ತಾಯಿ ಆಗ್ತೀನಿ ಎಂದು ಬಂದಿದ್ದ ಮಲತಾಯಿ ರಾಕ್ಷಸಿಯಾಗ್ಬಿಟ್ಟಿದ್ದಾಳೆ. ಬಿಲ್ಡಿಂಗ್‌ನಿಂದ ಬಿದ್ದು ಮೊಮ್ಮಗಳು ಜೀವ ಬಿಟ್ಟಳು ಅಂದುಕೊಂಡಿದ್ದ ಅಜ್ಜಿಗೆ ಮಲತಾಯಿಯ ಕ್ರೌರ್ಯವನ್ನ ಸಿಸಿಟಿವಿ ಬಿಚ್ಚಿಟ್ಟಿದೆ. ಹೌದು..ತಾಯಿ ಸ್ಥಾನ ತುಂಬುತ್ತೀನಿ ಅಂತ ಬಂದಿದ್ದ ಮಲತಾಯಿಯೇ ಬಾಲಕಿ ಜೀವವನ್ನ ಬಲಿ ಪಡೆದಿದ್ದಾಳೆ. 3ನೇ ಮಹಡಿಯಿಂದ 7 ವರ್ಷದ ಸಾನ್ವಿಯನ್ನ ತಳ್ಳಿ ಮಲತಾಯಿ ರಾಧಾ ಹತ್ಯೆಗೈದಿರುವ ಘಟನೆ ಬೀದರ್‌ನ ಆದರ್ಶ ಕಾಲೋನಿಯಲ್ಲಿ ನಡೆದಿದೆ. ಮಲತಾಯಿ ತಳ್ಳಿದ್ದರಿಂದ ಕೆಳಗೆ ಬಿದ್ದ ಸಾನ್ವಿ, ಅಲ್ಲಿಂದ ನಡೆದುಕೊಂಡು ರಸ್ತೆಗೆ ಬಂದು ಒದ್ದಾಡಿ ಜೀವಬಿಟ್ಟಿದ್ದಾಳೆ. ಇನ್ನು ಸಾನ್ವಿಯ ಕೊನೆ ಕ್ಷಣದ ದೃಶ್ಯ ಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯ ನೋಡಿದ್ರೆ ಕರುಳು ಚುರುಕ್ ಅನ್ನುತ್ತೆ. ಕಣ್ಣಲ್ಲಿ ನೀರುಬರುತ್ತೆ.

ಇದನ್ನೂ ಓದಿ: ಬೀದರ್ ನಲ್ಲೊಂದು ಅಮಾನವೀಯ ಘಟನೆ: ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ

ಬಿದ್ದ ತಕ್ಷಣ ಸಾನ್ವಿ ನಿಲ್ಲುವ ಸ್ಥಿತಿಯಲ್ಲಿರಲಿಲ್ಲ. ಆದರೂ ನರಳಾಡುತ್ತ ಎದ್ದು ರಸ್ತೆಗೆ ಬರಲು ಯತ್ನಿಸಿದ್ದಾಳೆ. ಆ ವೇಳೆ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ  ಹಿಡಿದುಕೊಳ್ಳಿ ಎಂದು ಕೈಚಾಚಿದ್ದಾಳೆ. ಆಗ ಕೆಲವರು ಬಂದು ಸಾನ್ವಿಯನ್ನು ಹಿಡಿದು ನಿಲ್ಲಿಸಲು ಯತ್ನಿಸಿದ್ದಾರೆ. ಆದ್ರೆ ಸಾನ್ವಿ ಬಿದ್ದ ರಭಸಕ್ಕೆ ನಿಲ್ಲಲು ಆಗಲಿಲ್ಲ. ಕೊನೆಗೆ ರಸ್ತೆಯಲ್ಲೇ ಒದ್ದಾಡಿ ಅಲ್ಲೇ ಕುಸಿದುಬಿದ್ದು ಜೀವ ಬಿಟ್ಟಿದ್ದಾಳೆ. ರಸ್ತೆಯಲ್ಲಿ ನರಳಾಡುತ್ತಿದ್ದರೂ ಸಹ ರಾಕ್ಷಸಿ ಮಲತಾಯಿ ಸಹ ಬಂದು ನೋಡಲೇ ಇಲ್ಲ.  ಮನುಷತ್ವ ಇಲ್ಲದೇ ಕ್ರೂರಿ ಮಹಿಳೆಗೆ ಎಷ್ಟು ಕಟುಕಿ ಎನ್ನುವುದು ಇಲ್ಲಿ ಗೊತ್ತಾಗುತ್ತೆ.

Published on: Sep 16, 2025 06:02 PM
Follow Us
Suresh Naik

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More