ಪತಿಯನ್ನು ಎಳೆತರದೆ ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಶಕ್ತಿ ನನಗಿದೆ: ವೀಣಾ ಕಾಶಪ್ಪನವರ್, ಕಾಂಗ್ರೆಸ್ ನಾಯಕಿ
ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಉದ್ಧವಿಸಲ್ಲ, 28 ನೇ ತಾರೀಖು ಬೆಂಬಲಿಗರ ಸಭೆ ನಡೆಸಿ ಒಂದು ನಿರ್ಣಯ ತೆಗೆದುಕೊಳ್ಳಲಾಗುವುದು, ವರಿಷ್ಠರು ಹೆಸರು ಬದಲಾಯಿಸಿದರೆ ಸರಿ, ಇಲ್ಲದಿದ್ದರೆ ತನ್ನ ದಾರಿ ತನಗೆ ಎನ್ನುವ ವೀಣಾ ತನ್ನ ಪತಿ ಮತ್ತು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಹೊರಗಿಟ್ಟು ತಾನು ಸ್ಫರ್ಧಿಸುವುದಾಗಿ ಹೇಳಿದರು.
ಬಾಗಲಕೋಟೆ: ಟಿಕೆಟ್ ವಂಚಿತೆ ವೀಣಾ ಕಾಶಪ್ಪನವರ್ (Veena Kashappanavar) ಈಗಲೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಸಿಗುವ ಬಗ್ಗೆ ಆಶಾವಾದಿಯಾಗಿದ್ದಾರೆ. ಬಿ ಫಾರ್ಮ್ (B Form) ನೀಡದ ಕಾರಣ ಕಾಲವಿನ್ನೂ ಮಿಂಚಿಲ್ಲ, ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ದೇವರಾಜ ಅವರನ್ನು ಬಾದಾಮಿ ಕ್ಷೇತ್ರದ ಅಭ್ಯರ್ಥಿ ಅಂತ ಪ್ರಕಟಿಸಿದ್ದರೂ ನಂತರ ಬಿಬಿ ಚಿಮ್ಮನಕಟ್ಟಿ (BB Chimmankatti) ಅವರಿಗೆ ಟಿಕೆಟ್ ನೀಡಲಾಗಿತ್ತು, ಹಾಗಾಗಿ ತನಗೆ ಟಿಕೆಟ್ ಸಿಗುವ ನಿರೀಕ್ಷೆಯಿದೆ ಎಂದು ರವಿವಾರ ರಾತ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ವೀಣಾ ಹೇಳಿದರು. ಬಾಗಲಕೋಟೆಯಿಂದ ಬೇರೆಯವರಿಗೆ ಟಿಕೆಟ್ ಸಿಕ್ಕಿರುವುದು ಕೇವಲ ತನ್ನ ಸಮುದಾಯ ಮಾತ್ರವಲ್ಲ ಬೇರೆ ಸಮುದಾಯದ ಜನರಿಗೂ ಆಘಾತವುಂಟು ಮಾಡಿದೆ, ಕಳೆದ 5 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ತನಗೆ ಹೇಗೆ ಟಿಕೆಟ್ ತಪ್ಪುವುದು ಸಾಧ್ಯ ಅಂತ ಬೇರೆ ಬೇರೆ ಜಿಲ್ಲೆಗಳ ಜನ ಸಹ ಫೋನ್ ಮಾಡಿ ಕೇಳುತ್ತಿದ್ದಾರೆ ಎಂದು ಹೇಳಿದ ವೀಣಾ ಹೇಳಿದರು. ಚುನಾವಣಾ ಕಣದಿಂದ ಹಿಂದೆ ಸರಿಯುವ ಪ್ರಶ್ನೆಯೇ ಉದ್ಧವಿಸಲ್ಲ, 28 ನೇ ತಾರೀಖು ಬೆಂಬಲಿಗರ ಸಭೆ ನಡೆಸಿ ಒಂದು ನಿರ್ಣಯ ತೆಗೆದುಕೊಳ್ಳಲಾಗುವುದು, ವರಿಷ್ಠರು ಹೆಸರು ಬದಲಾಯಿಸಿದರೆ ಸರಿ, ಇಲ್ಲದಿದ್ದರೆ ತನ್ನ ದಾರಿ ತನಗೆ ಎನ್ನುವ ವೀಣಾ ತನ್ನ ಪತಿ ಮತ್ತು ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಹೊರಗಿಟ್ಟು ತಾನು ಸ್ಫರ್ಧಿಸುವುದಾಗಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಓದಿ: ಪಕ್ಷಕ್ಕೆ ರುಂಡ ಕೊಡ್ತೀನಿ, ವೈಯಕ್ತಿಕ ಬಂದರೆ ಯಾವ ಮಗನಿಗೂ ಬಗ್ಗೋದಿಲ್ಲ: ವಿಜಯಾನಂದ ಕಾಶಪ್ಪನವರ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
