ಗಾಳಿ ಮಳೆಗೆ ಹಾರಿ ಹೋದ ಶಾಲಾ ಮೇಲ್ಚಾವಣಿ: ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಮಕ್ಕಳು ಬಚಾವ್​​

Edited By:

Updated on: Mar 18, 2026 | 5:57 PM

ಹುಣಸೂರು ತಾಲೂಕಿನ ದಾಸನಪುರದಲ್ಲಿ ಶಾಲಾ ಶಿಕ್ಷಕಿಯ ಸಮಯ ಪ್ರಜ್ಞೆಯಿಂದ ಸಂಭವನೀಯ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳಿರುವ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಛಾವಣಿ ಹಾರಿಹೋಗಿದ್ದು, ಶಿಕ್ಷಕಿ ವಿದ್ಯಾರ್ಥಿಗಳನ್ನು ಡೆಸ್ಕ್​​ ಕೆಳಗೆ ಕೂರಿಸಿದ ಕಾರಣ ಎಲ್ಲರೂ ಬಚಾವ್​​ ಆಗಿದ್ದಾರೆ. ಹೀಗಿದ್ದರೂ ಒಂದೊಮ್ಮೆ ಮೇಲ್ಛಾವಣಿ ಕುಸಿದಿದ್ದರೆ ದೊಡ್ಡ ಅನಾಹುತವೇ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

ಮೈಸೂರು, ಮಾರ್ಚ್​​ 18: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿದಿದೆ. ಸುಮಾರು 1 ಗಂಟೆಗೂ ಹೆಚ್ಚು ಸಮಯ ವರುಣ ಅಬ್ಬರಿಸಿದ್ದು, ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಮಂದಿಗೆ ತಂಪಿನ ಅನುಭವವಾಗಿದೆ. ಈ ನಡುವೆ ಭಾರೀ ಗಾಳಿ ಮಳೆ ವೇಳೆ ಹುಣಸೂರು ತಾಲೂಕಿನ ದಾಸನಪುರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಮಕ್ಕಳು ತರಗತಿಯಲ್ಲಿದ್ದ ಹೊತ್ತಲ್ಲೇ ಗಾಳಿ ಮಳೆಗೆ ಶಾಲೆಯ ಮೇಲ್ಚಾವಣಿ ಹಾರಿ ಹೋಗಿದ್ದು, ಈ ವೇಳೆ ಸಮಯಪ್ರಜ್ಞೆ ಮೆರೆದ ಶಿಕ್ಷಕಿ ಸುಮಾ ಎಲ್ಲ ವಿದ್ಯಾರ್ಥಿಗಳನ್ನು ಡೆಸ್ಕ್ ಕೆಳಗೆ‌ ಕೂರಿಸಿದ್ದಾರೆ. ಹೀಗಾಗಿ ಸಂಭವನೀಯ ಅನಾಹುತ ತಪ್ಪಿದೆ. ಗಾಳಿಗೆ ಮೇಲ್ಛಾವಣಿ ಹಾರಿ ಹೋಗುವ ಬದಲು ಕುಸಿದಿದ್ದರೆ ದೊಡ್ಡ ಅನಾಹುತವೇ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More