AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಬಲೆ ಹಾಕಿ ಬೀದಿ ನಾಯಿಯ ಹಿಡಿದು ಅಮಾನುಷವಾಗಿ ಕೊಲೆ, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ

ಶಿವಮೊಗ್ಗ: ಬಲೆ ಹಾಕಿ ಬೀದಿ ನಾಯಿಯ ಹಿಡಿದು ಅಮಾನುಷವಾಗಿ ಕೊಲೆ, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ

Basavaraj Yaraganavi
| Updated By: Ganapathi Sharma|

Updated on: Dec 09, 2025 | 8:03 AM

Share

ಹಂದಿ ಮರಿಯನ್ನು ತಿನ್ನುತ್ತಿದೆ ಎಂದು ಹಂದಿ ಹಿಡಿಯುವ ಯುವಕರ ತಂಡವೊಂದು ಬೀದಿ ನಾಯಿಯನ್ನು ಬಲೆ ಹಾಕಿ ಹಿಡಿದು ಸಾರ್ವಜನಿಕವಾಗಿ ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಶಿವಮೊಗ್ಗದ ಗೋಪಾಳ ಪೊಲೀಸ್ ಬಡಾವಣೆಯಲ್ಲಿ ನಡೆದಿದೆ. ಅಮಾನುಷ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಶಿವಮೊಗ್ಗ, ಡಿಸೆಂಬರ್ 9: ಹಂದಿ ಹಿಡಿಯಲು ಬಂದ ಯುವಕರ ಗುಂಪು ಬಲೆ ಹಾಕಿ ಬೀದಿ ನಾಯಿಯನ್ನು ಹಿಡಿದು ಕ್ರೂರವಾಗಿ ಬಡಿದು ಕೊಂದ ಘಟನೆ ಶಿವಮೊಗ್ಗದ ಗೋಪಾಳ ಪೊಲೀಸ್ ಬಡಾವಣೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಬೀದಿನಾಯಿ ಹಂದಿಮರಿಗಳನ್ನು ಹಿಡಿದು ತಿಂದು ಹಾಕಿದೆ ಎಂದು ಯುವಕರು ಸಿಟ್ಟಿಗೆದ್ದಿದ್ದು, ಬಲೆ ಹಾಕಿ ನಾಯಿಯನ್ನು ಹಿಡಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇಡೀ ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ದುಷ್ಕೃತ್ಯದ ವಿರುದ್ಧ ಪ್ರಾಣಿ ರಕ್ಷಣಾ ಸೇವೆ ತಂಡದವರು ತುಂಗಾ ನಗರ ಠಾಣೆಗೆ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ