AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶಸ್ವಿ ವಿದ್ಯಾರ್ಥಿಯಾಗಬೇಕೇ?: ಅದೃಷ್ಟ ಮಾತ್ರ ಸಾಲದು, ಈ 5 ಗುಣಗಳನ್ನು ಇಂದೇ ರೂಢಿಸಿಕೊಳ್ಳಿ!

ಯಶಸ್ವಿ ವಿದ್ಯಾರ್ಥಿಯಾಗಬೇಕೇ?: ಅದೃಷ್ಟ ಮಾತ್ರ ಸಾಲದು, ಈ 5 ಗುಣಗಳನ್ನು ಇಂದೇ ರೂಢಿಸಿಕೊಳ್ಳಿ!

ಅಕ್ಷಯ್​ ಪಲ್ಲಮಜಲು​​
|

Updated on: Jun 04, 2026 | 7:11 AM

Share

ವಿದ್ಯಾರ್ಥಿ ಜೀವನದ ಯಶಸ್ಸಿಗೆ ಶಿಸ್ತು, ಸಂಯಮ, ತಾಳ್ಮೆ, ಏಕಾಗ್ರತೆ ಹಾಗೂ ಜ್ಞಾನಾರ್ಜನೆ ಅತ್ಯಾವಶ್ಯಕ. ಸೂರ್ಯೋದಯಕ್ಕೆ ಮುನ್ನ ಏಳುವುದು, ಸಮತೋಲಿತ ಆಹಾರ ಸೇವಿಸುವುದು ಮತ್ತು ಲೌಕಿಕ ಆಕರ್ಷಣೆಗಳಿಂದ ದೂರವಿರುವುದು ಆದರ್ಶ ವಿದ್ಯಾರ್ಥಿಯ ಲಕ್ಷಣಗಳು. ಕಾಕಚೇಷ್ಟ, ಬಕೋಧ್ಯಾನಂ, ಶ್ವಾನನಿದ್ರಾ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬಹುದು.

ಬೆಂಗಳೂರು, ಜೂ.4: ಪ್ರತಿಯೊಬ್ಬರ ಜೀವನದಲ್ಲಿ ವಿದ್ಯಾರ್ಥಿ ಜೀವನವು ಅತ್ಯಂತ ಮಹತ್ವದ ಹಂತವಾಗಿದೆ. ಈ ಅವಧಿಯಲ್ಲಿ ರೂಢಿಸಿಕೊಳ್ಳುವ ಅಭ್ಯಾಸಗಳು ಭವಿಷ್ಯವನ್ನು ರೂಪಿಸುತ್ತವೆ. ಯಶಸ್ವಿ ವಿದ್ಯಾರ್ಥಿಯಾಗಲು ಕೇವಲ ಅದೃಷ್ಟವಷ್ಟೇ ಸಾಲದು. ಶಿಸ್ತು, ಸಂಯಮ, ತಾಳ್ಮೆ, ಸಹನೆ ಮತ್ತು ಆಲೋಚನಾ ಶಕ್ತಿಗಳನ್ನು ಬೆಳೆಸಿಕೊಳ್ಳುವುದು ಅನಿವಾರ್ಯ. ಉದಾಸೀನತೆ ಹಾಗೂ ನಿರ್ಲಕ್ಷ್ಯ ಸ್ವಭಾವಗಳು ಯಶಸ್ಸಿಗೆ ಅಡ್ಡಿಯಾಗುತ್ತವೆ. ವಿದ್ಯಾದದಾತಿ ವಿನಯಂ ಎಂಬಂತೆ, ವಿದ್ಯೆಯು ವಿನಯವನ್ನು ನೀಡುತ್ತದೆ. ವಿನಯವು ಅರ್ಹತೆಯನ್ನು, ಅರ್ಹತೆಯು ಸಂಪತ್ತನ್ನು ಮತ್ತು ಸಂಪತ್ತು ಸುಖಮಯ ಜೀವನವನ್ನು ತರುತ್ತದೆ. ಆದರ್ಶ ವಿದ್ಯಾರ್ಥಿಯು ಸೂರ್ಯೋದಯಕ್ಕೆ ಮುನ್ನ ಏಳಬೇಕು, ಏಕಾಗ್ರತೆಯಿಂದ ಅಧ್ಯಯನ ಮಾಡಬೇಕು ಮತ್ತು ಸಮತೋಲಿತ ಆಹಾರ ಸೇವಿಸಬೇಕು. ಬಾಲ್ಯದಿಂದಲೇ ಪೋಷಕರು ಮತ್ತು ಶಿಕ್ಷಕರು ಉತ್ತಮ ಸಂಸ್ಕಾರಗಳನ್ನು ಕಲಿಸುವುದು ಮುಖ್ಯ. ಜ್ಞಾನ ಸಂಪಾದನೆಗೆ ನಿರಂತರವಾಗಿ ಹೊಸ ವಿಷಯಗಳನ್ನು ಕಲಿಯುವುದು ಯಶಸ್ಸಿಗೆ ದಾರಿಯಾಗುತ್ತದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More