Big Announcement: ವಿದ್ಯಾರ್ಥಿಗಳು ಜೂನ್ 15ರವರೆಗೆ ಹಳೆಯ ಬಸ್​ಪಾಸ್​ನೊಂದಿಗೆ ಸರ್ಕಾರೀ ಬಸ್​ಗಳಲ್ಲಿ ಪ್ರಯಾಣಿಸಬಹುದು: ರಾಮಲಿಂಗಾರೆಡ್ಡಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 01, 2023 | 6:25 PM

ಜೂನ್ 15ರೊಳಗೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಬೆಂಗಳೂರು: ಬಸ್ ಪಾಸ್ ಕುರಿತು ವಿದ್ಯಾರ್ಥಿಗಳಲ್ಲಿ ಉಂಟಾಗಿದ್ದ ಗೊಂದಲವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಾತ್ಕಾಲಿಕವಾಗಿ ದೂರ ಮಾಡಿದ್ದಾರೆ. ಜೂನ್ 15 ರವರೆಗೆ ವಿದ್ಯಾರ್ಥಿಗಳು ತಮ್ಮ ಕಳೆದ ಶೈಕ್ಷಣಿಕ ವರ್ಷದ ಪಾಸು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆ ಆಥವಾ ಕಾಲೇಜಿಗೆ ಪಾವತಿಸಿದ ಶುಲ್ಕದ ರಸೀತಿಯನ್ನು (receipt) ಬಿಎಮ್ ಟಿಸಿ (BMTC) ಇಲ್ಲವೇ ಕೆಎಸ್ ಆರ್ ಟಿಸಿ (KSRTC) ಬಸ್ ಗಳಲ್ಲಿ ಕಂಡಕ್ಟರ್ ಗೆ ತೋರಿಸಿದರೆ ಸಾಕು. ಜೂನ್ 15 ರ ಬಳಿಕ ಹೊಸ ಬಸ್ ಪಾಸ್ ಗಳ ವಿತರಣೆ ಆರಂಭವಾಗಲಿದೆ. ಸಾರಿಗೆ ಸಚಿವರು ಟ್ವೀಟ್ ಮೂಲಕ ಈ ವಿಷಯವನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟರೊಳಗೆ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪ್ರಯಾಣದ ಗ್ಯಾರಂಟಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.