ಏಕಾಏಕಿ ಹೊತ್ತಿ ಉರಿದ ಬಿಎಂಟಿಸಿ ಬಸ್; ಅದೃಷ್ಟವಶಾತ್ ಪ್ರಯಾಣಿಕರು ಪಾರು
ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಸಂಭವಿಸಿದೆ.
ಬೆಂಗಳೂರು: ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ (south end circle) ನಲ್ಲಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ (BMTC BUS) ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಕಿಡಿ ಕಾಣುತ್ತಿದ್ದಂತೆ ಸಮಯ ಪ್ರಜ್ಞೆ ಮೇರೆದ ಬಸ್ ಚಾಲಕ ಎಲ್ಲಾ ಪ್ರಯಾಣಿಕರನ್ನ ಬಸ್ನಿಂದ ಕೆಳಗೆ ಇಳಿಸಿದ್ದಾರೆ. ಹಾಗಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಪ್ರಯಾಣಿಕರನ್ನು ಮತ್ತೊಂದು ಬಸ್ ನಲ್ಲಿ ಪ್ರಯಾಣ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮೆಜೆಸ್ಟಿಕ್ನಿಂದ ಬನಶಂಕರಿ ನಿಲ್ದಾಣಕ್ಕೆ ತೆರಳುತ್ತಿದ್ದ ಬಸ್ ನಂದ ಟಾಕೀಸ್ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿಮ ಯಶಸ್ವಿಯಾಗಿದ್ದಾರೆ. ವಾರದ ಹಿಂದೆಯೂ ಕೂಡ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆಯೊಂದು ಸಂಭವಿಸಿತ್ತು.
ಇದನ್ನೂ ಓದಿ;
ನಟಿ ರಮ್ಯಾ ಜೊತೆಗಿರುವ ರಾಣಿ ಯಾರು? ವಾವ್.. ಆಕಸ್ಮಿಕವಾಗಿ ಸಿಕ್ಕ ಜೀವದ ಬಗ್ಗೆ ಈ ಪರಿ ಪ್ರೀತಿ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು

