ದೇವಕಿ-ಯಶೋದೆಯಂತೆ ಕನ್ನಡ ಮತ್ತು ಮರಾಠಿ: ಭಾಷಾ ಬಾಂಧವ್ಯದ ಬಗ್ಗೆ ಸುಧಾಮೂರ್ತಿ ಅವರ ಮನದಾಳದ ಮಾತು!
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು ಎಂದು ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 29: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರು ಕನ್ನಡ ಮತ್ತು ಮರಾಠಿ ಭಾಷೆಗಳ ನಡುವಿನ ಸಂಬಂಧವನ್ನು ತಾಯಿ ಮತ್ತು ಮೌಶಿ (ಚಿಕ್ಕಮ್ಮ) ಬಾಂಧವ್ಯಕ್ಕೆ ಹೋಲಿಸಿದ್ದಾರೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾಮೂರ್ತಿ ತಮ್ಮ ಜೀವನದಲ್ಲಿ ಈ ಎರಡು ಭಾಷೆಗಳ ಸ್ಥಾನವನ್ನು ಸುಂದರವಾಗಿ ಬಣ್ಣಿಸುತ್ತಾರೆ. ನನಗೆ ಕನ್ನಡ ನನ್ನ ಹೆತ್ತ ತಾಯಿಯಿದ್ದಂತೆ, ಆದರೆ ಮರಾಠಿ ಭಾಷೆ ನನಗೆ ಚಿಕ್ಕಮ್ಮನಿದ್ದಂತೆ. ಶ್ರೀಕೃಷ್ಣನಿಗೆ ದೇವಕಿ ಮತ್ತು ಯಶೋದೆಯೆಂಬ ಇಬ್ಬರು ತಾಯಂದಿರಿದ್ದಂತೆ, ನನಗೂ ಈ ಎರಡು ಭಾಷೆಗಳು ಅಷ್ಟೇ ಪ್ರಿಯವಾದವು ಎಂದು ಹೇಳಿದ್ದಾರೆ.
ನಾವು ಎಲ್ಲಿ ವಾಸಿಸುತ್ತೇವೆಯೋ ಆ ರಾಜ್ಯದ ಭಾಷೆಯನ್ನು ಕಲಿಯಬೇಕು ಎಂದ ಅವರು, ಮಹಾರಾಷ್ಟ್ರದಲ್ಲಿರುವ ಕನ್ನಡಿಗರು ಮರಾಠಿ ಕಲಿಯಬೇಕು, ಕರ್ನಾಟಕದಲ್ಲಿರುವ ಮರಾಠಿಗರು ಕನ್ನಡ ಕಲಿಯಬೇಕು. ಭಾಷೆ ಎಂಬುದು ಮನುಷ್ಯರನ್ನು ಬೆಸೆಯುವ ಸೇತುವೆಯಾಗಬೇಕೇ ಹೊರತು ಗೋಡೆಯಾಗಬಾರದು ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us