ಸುಧಾಕರ್ ಏನು ಶಾಸಕರೇ ರಾಜ್ಯದಲ್ಲಿ ಕೆಲಸ ಕೊಡಿಸಲು? ಅವರೊಬ್ಬ ಸಂಸದ: ಅರ್ ಅಶೋಕ, ವಿಪಕ್ಷ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Aug 07, 2025 | 4:33 PM

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಕಾರು ಚಾಲಕ ಬಾನು ಸಂಸದ ಡಾ ಕೆ ಸುಧಾಕರ್ ಹೆಸರನ್ನು ಡೆತ್ ನೋಟ್​ನಲ್ಲಿ ಬರೆದು ಅತ್ಮಹತ್ಯೆ ಮಾಡಿಕೊಂಡಿರುವ ವಿಷಯದ ಬಗ್ಗೆ ಮಾತಾಡಿದ ಅಶೋಕ, ಕೆಲಸ ಕೊಡಿಸಲು ಅವರೇನು ಸರ್ಕಾರದ ಭಾಗವೇ? ಅವರೊಬ್ಬ ಸಂಸದ, ರಾಜ್ಯದಲ್ಲಿ ಹೇಗೆ ಕೆಲಸ ಕೊಡಿಸುತ್ತಾರೆ? ತನಿಖೆಯಾಗಬೇಕು ಎಂದರು.

ದೆಹಲಿ,ಆಗಸ್ಟ್ 7: ವಿರೋಧ ಪಕ್ಷದ ನಾಯಕ ಅರ್ ಅಶೋಕ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತ, ಹಗರಣಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿದ್ದೇನೆ, ಸುರಂಗ ಮಾರ್ಗ ಯೋಜನೆಯನ್ನು (tunnel road project) ಬಿಜೆಪಿ ವಿರೋಧಿಸುತ್ತಿರುವುದನ್ನು ಸಹ ಹೇಳಿದ್ದೇನೆ ಎಂದು ಹೇಳಿದರು. ಪಕ್ಷದ ರಾಜ್ಯಾಧ್ಯಕ್ಷದ ನೇಮಕಾತಿ ಬಗ್ಗೆ ವರಿಷ್ಠರು ಏನನ್ನೂ ಹೇಳಲಿಲ್ಲ, ನಾನೂ ಸಹ ಕೇಳಿಲ್ಲ, ಪ್ರಾಯಶಃ ರಾಷ್ಟ್ರೀಯ ಅಧ್ಯಕ್ಷರ ನೇಮಕಾತಿ ನಂತರ ರಾಜ್ಯಾಧ್ಯಕ್ಷರ ಘೋಷಣೆಯಾಗಬಹುದು, ಅದೆಲ್ಲ ಹೈಕಮಾಂಡ್​ಗೆ ಬಿಟ್ಟ ವಿಚಾರ, ಅವರು ತೆಗದುಕೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿರುತ್ತೇವೆ ಎಂದು ಅಶೋಕ ಹೇಳಿದರು.

ಇದನ್ನೂ ಓದಿ:   ತಮ್ಮ ಪವರ್ ಶಿವಕುಮಾರ್​ಗೆ ತೋರಿಸಲು ಸಿದ್ದರಾಮಯ್ಯ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ: ಅಶೋಕ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.