ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಗುಂಡು, ತುಂಡು: ಬಿಯರ್, ಹಾಟ್ ಡ್ರಿಂಕ್ಸ್​​ಗೆ ಮುಗಿಬಿದ್ದ ಜನ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2024 | 6:03 PM

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸುಧಾಕರ್ ಗೆಲುವು ಸಾಧಿಸಿದ ಹಿನ್ನಲೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಬಿಜೆಪಿ ಅಧ್ಯಕ್ಷ ಜಗದೀಶ್ ಚೌದ್ರಿ ಬಾಡೂಟ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ 90 ಪಾಕೇಟ್ ಜೊತೆ ಬಿಯರ್​ ಬಾಟಲ್​ ಅನ್ನು ಹಂಚಿದ್ದಾರೆ. ಮದ್ಯದ ಬಾಟಲ್​​ಗಾಗಿ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

ನೆಲಮಂಗಲ, ಜುಲೈ 07: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್‌ (K. Sudhakar)
ಗೆಲುವು ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬಿಜೆಪಿ ಅಧ್ಯಕ್ಷ ಜಗದೀಶ್ ಚೌಧರಿ ಅಭಿನಂದನಾ ಸಮಾರಂಭ ಆಯೋಜಿಸಿದ್ದು, ಬಾಡೂಟ ಹಾಗೂ ಎಣ್ಣೆಯನ್ನು (liquor) ಕೂಡ ಹಂಚಲಾಗಿದೆ. 90 ಪಾಕೇಟ್ ಜೊತೆ ಬಿಯರ್ ಬಾಟಲ್​ನ್ನು ನೀಡಲಾಗಿದೆ. ಈ ವೇಳೆ ಮದ್ಯದ ಬಾಟಲ್​​ಗಾಗಿ ಜನರು ಮುಗಿಬಿದಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಅಬಕಾರಿ ಡಿಸಿ ನಾಗೇಶ್ ಪರ್ಮಿಷನ್ ಕೊಟ್ಟಿದ್ದಾರೆ ನಾವೇನೂ ಮಾಡುವುದಕ್ಕೆ ಆಗಲ್ಲ ಎಂದು ನೆಲಮಂಗಲ ಪೊಲೀಸರು ಹೇಳಿದ್ದಾರೆ. ಮದ್ಯದ ಪಾರ್ಟಿ ಬಗ್ಗೆ ಗೊತ್ತಿದ್ದರೂ ನೂತನ ಎಸ್​ಪಿ ಸಿ.ಕೆ.ಬಾಬಾ ಸುಮ್ಮನಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 6:01 pm, Sun, 7 July 24

Follow us on