AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇತ್ತೀಚೆಗೆ ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಆಗಲೇ ಇಲ್ಲ’; ಬೇಸರ ಹೊರಹಾಕಿದ ಸುಧಾರಾಣಿ

‘ಇತ್ತೀಚೆಗೆ ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಆಗಲೇ ಇಲ್ಲ’; ಬೇಸರ ಹೊರಹಾಕಿದ ಸುಧಾರಾಣಿ

ರಾಜೇಶ್ ದುಗ್ಗುಮನೆ
|

Updated on:Apr 14, 2025 | 10:24 AM

Share

ನಟಿ ಸುಧಾರಾಣಿ ಅವರು ಬ್ಯಾಂಕ್ ಜನಾರ್ಧನ್ ಸಾವಿಗೆ ಮರುಕ ವ್ಯಕ್ತಪಡಿಸಿದ್ದಾರೆ. ಅವರ ಸಾವಿನ ಬಗ್ಗೆ ಕಂಬನಿ ಹೊರಹಾಕಿದ್ದಾರೆ. ಟಿವಿ9 ಕನ್ನಡದ ಜೊತೆ ಮಾತನಾಡಿದ ಅವರು ಈ ಬಗ್ಗೆ ಮಾತನಾಡಿದ್ದಾರೆ. ಇತ್ತೀಚೆಗೆ ಅವರ ಭೇಟಿ ಮಾಡಲು ಅವಕಾಶ ಸಿಗಲೇ ಇಲ್ಲ ಎಂದು ಸಂತಾಪ ಹೊರಹಾಕಿದ್ದಾರೆ.

ಸುಧಾರಾಣಿ (Sudharani) ಅವರು ‘ಬ್ಯಾಂಕ್ ಜನಾರ್ಧನ್’ ಸಾವಿನ ಬಗ್ಗೆ ಸಂತಾಪ ಹೊರಹಾಕಿದ್ದಾರೆ. ಇಬ್ಬರೂ ಕೆಲವು ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಜನಾರ್ಧನ್ ನಿಧನ ವಾರ್ತೆ ಅವರಿಗೆ ಬೇಸರ ತಂದಿದೆ. ‘ಇತ್ತೀಚೆಗೆ ನನಗೆ ಜನಾರ್ಧನ್ ಅವರನ್ನು ಭೇಟಿ ಮಾಡುವ ಅವಕಾಶ ಸಿಗಲೇ ಇಲ್ಲ ಎಂಬುದು ಬೇಸರದ ವಿಚಾರ. ಈ ರೀತಿಯ ಕಲಾವಿದರ ಕಷ್ಟದ ಕಾಲದಲ್ಲಿ ನಾವು ಅವರ ಜೊತೆ ಇರಬೇಕು ಎಂದುಕೊಂಡಿದ್ದೆವು. ಆದಾಗ್ಯೂ ಇವರ ಭೇಟಿ ಆಗಿಲ್ಲ’ ಎಂದಿದ್ದಾರೆ ಸುಧಾರಾಣಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 14, 2025 10:24 AM

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More