ಮೈಸೂರು: ಕಾಡಾನೆ ದಾಳಿಯಿಂದ ಬೆಳೆದು ನಿಂತು ಕಬ್ಬು ನಾಶ, ಪರಿಹಾರ ಕೇಳುತ್ತಿರುವ ನೊಂದ ರೈತ
ಕಾಡಾನೆಳಿಂದ ಬೆಳೆ ಹಾಳಾದಾಗಲೆಲ್ಲ ಅರಣ್ಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜಮೀನಿನ ಒಂದು ಪೋಟೋ ತೆಗೆದುಕೊಂಡು ಒಂದೆರಡು ಸಾವಿರ ರೂಪಾಯಿ ಪರಿಹಾರ ನೀಡುತ್ತಾರೆ ಎಂದು ಮಹೇಶ್ ಹೇಳುತ್ತಾರೆ. ಬೆಳೆಗಾಗಿ ಸಾಲಸೋಲ ಮಾಡಿದ್ದು ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಅವರು ಮನವಿ ಮಾಡುತ್ತಿದ್ದಾರೆ.
ಮೈಸೂರು: ಮಳೆಯಿಲ್ಲದೆ (deficit rain) ರಾಜ್ಯಾದಾದ್ಯಂತ ರೈತರು ಕಂಗಾಲಾಗಿದ್ದರೆ ನೀರಿಗಾಗಿ ವ್ಯವಸ್ಥೆ ಮಾಡಿಕೊಂಡು ಕಬ್ಬು ಬೆಳೆದ ಈ ರೈತನ ಗೋಳು ಬೇರೆ ತೆರನಾದದ್ದು. ಜಿಲ್ಲೆಯ ನಂಜನಗೂಡು (Nanjangud) ತಾಲ್ಲೂಕಿನ ಹೊಸವೀಡು ಗ್ರಾಮದ ರೈತ ಮಹೇಶ್ (Mahesh) ಅನ್ನೋರು ತನ್ನ 5-ಎಕರೆ ಜಮೀನಲ್ಲಿ ಸೊಂಪಾಗಿ ಕಬ್ಬು ಬೆಳೆದಿದ್ದರು. ಆದರೆ, ಕಾಡಾನೆಗಳ ದಾಳಿಯಿಂದ ಬೆಳೆದು ನಿಂತಿದ್ದ ಕಬ್ಬು ಸರ್ವನಾಶವಾಗಿದೆ. ಹೀಗೆ ಆಗುತ್ತಿರೋದು ಮೊದಲ ಸಲವೇನಲ್ಲ. ಕಾಡಾನೆಳಿಂದ ಬೆಳೆ ಹಾಳಾದಾಗಲೆಲ್ಲ ಅರಣ್ಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಜಮೀನಿನ ಒಂದು ಪೋಟೋ ತೆಗೆದುಕೊಂಡು ಒಂದೆರಡು ಸಾವಿರ ರೂಪಾಯಿ ಪರಿಹಾರ ನೀಡುತ್ತಾರೆ ಎಂದು ಮಹೇಶ್ ಹೇಳುತ್ತಾರೆ. ಬೆಳೆಗಾಗಿ ಸಾಲಸೋಲ ಮಾಡಿದ್ದು ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಅವರು ಮನವಿ ಮಾಡುತ್ತಿದ್ದಾರೆ. ಜಮೀನು ಸುತ್ತ ತಂತಿ ಬಿಗಿದು ಬೇಲಿ ನಿರ್ಮಿಸಿದರೂ ಆನೆಗಳು ಆದನ್ನು ಕಿತ್ತಿ, ತುಳಿದು ಒಳನುಗ್ಗುತ್ತಿವೆ ಅಂತ ರೈತ ಹೇಳುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ

