AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟನ್​ ಕಬ್ಬಿಗೆ 3500 ರೂ.ಗೆ ಪಟ್ಟು: ವಿಜಯಪುರ - ಬೆಳಗಾವಿ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ

ಟನ್​ ಕಬ್ಬಿಗೆ 3500 ರೂ.ಗೆ ಪಟ್ಟು: ವಿಜಯಪುರ – ಬೆಳಗಾವಿ ಹೆದ್ದಾರಿ ಬಂದ್ ಮಾಡಿ ರೈತರ ಪ್ರತಿಭಟನೆ

ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on: Nov 12, 2025 | 12:13 PM

Share

ಕ್ವಿಂಟಲ್ ಕಬ್ಬಿಗೆ 3,300 ರೂ. ದರ ನಿಗದಿ ಮಾಡಿದ್ದರೂ ಬಾಗಲಕೋಟೆ ಭಾಗದಲ್ಲಿ ರೈತರ ಹೋರಾಟ ಮುಂದುವರಿದಿದೆ. 3,500 ರೂ. ಬೆಲೆ ನಿಗದಿಪಡಿಸುವಂತೆ ಒತ್ತಾಯಿಸಿ ವಿಜಯಪುರ-ಬೆಳಗಾವಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರೈತರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತಿದ್ದಾರೆ. ಪರಿಸ್ಥಿತಿ ಗದ್ದಲದಿಂದ ಕೂಡಿತ್ತು, ರೈತರು ಹೆದ್ದಾರಿಯಲ್ಲಿ ತಮ್ಮ ಪಟ್ಟು ಸಡಿಲಿಸಿಲ್ಲ.

ಬಾಗಲಕೋಟೆ, ನವೆಂಬರ್ 12: ಬಾಗಲಕೋಟೆ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮುಂದುವರಿದಿದ್ದು, ವಿಜಯಪುರ-ಬೆಳಗಾವಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಕ್ವಿಂಟಲ್ ಕಬ್ಬಿಗೆ 3,500 ರೂ. ಬೆಲೆ ನಿಗದಿ ಮಾಡಲೇಬೇಕಂದು ರೈತರು ಪಟ್ಟು ಹಿಡಿದಿದ್ದಾರೆ. ಮುಧೋಳ ನಗರದಲ್ಲಿ ಸಂಜೆಯಿಂದ ರಾತ್ರಿ 11 ರವರೆಗೆ ನಡೆದ ಸಭೆಯೂ ವಿಫಲವಾಗಿದೆ. ರಾಜ್ಯ ಹೆದ್ದಾರಿ ಗ್ರಾಮೀಣ ಭಾಗದಲ್ಲಿ ರಸ್ತೆ ಬಂದ್ ಮಾಡುತ್ತಿರುವ, ಮುಧೋಳ‌ ಜಮಖಂಡಿ ಮಾರ್ಗ ಮಧ್ಯೆ ಇರುವ ಶಿರೋಳ ರಸ್ತೆಯ್ನೂ ಬಂದ್ ಮಾಡಿದ್ದಾರೆ. ಶಿರೋಳ. ಬುದ್ನಿ ಪಿಎಮ್ ರಸ್ತೆ ಕೂಡ ಬಂದ್ ಮಾಡಿದ್ದಾರೆ. ರಸ್ತೆಯಲ್ಲಿ ಮೇವಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More