AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿ ಕ್ಯಾಮರಾಗೇ ಬ್ಲ್ಯಾಕ್​ ಸ್ಪ್ರೇ ಮಾಡಿ ಎಟಿಎಂನಿಂದ 30 ಲಕ್ಷ ರೂ.ಕಳವು: ವಿಡಿಯೋ ನೋಡಿ ಬ್ಯಾಂಕ್ ಸಿಬ್ಬಂದಿಯೇ ಶಾಕ್

ಸಿಸಿ ಕ್ಯಾಮರಾಗೇ ಬ್ಲ್ಯಾಕ್​ ಸ್ಪ್ರೇ ಮಾಡಿ ಎಟಿಎಂನಿಂದ 30 ಲಕ್ಷ ರೂ.ಕಳವು: ವಿಡಿಯೋ ನೋಡಿ ಬ್ಯಾಂಕ್ ಸಿಬ್ಬಂದಿಯೇ ಶಾಕ್

ನವೀನ್ ಕುಮಾರ್ ಟಿ
| Edited By: |

Updated on: Mar 01, 2025 | 12:00 PM

Share

ಸಿಸಿ ಕ್ಯಾಮರಾಗಳಿಗೇ ಬ್ಲ್ಯಾಕ್ ಸ್ಪ್ರೇ ಮಾಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂನಿಂದ ಕಳ್ಳರು 30 ಲಕ್ಷ ರೂ. ಎಗರಿಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಘಟನೆಯ ವಿಡಿಯೋ ಸಿಸಿಟಿವಿ (ಬ್ಲ್ಯಾಕ್ ಸ್ಪ್ರೇ ಮಾಡುವ ವರೆಗಿನದ್ದು) ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ.

ದೇವನಹಳ್ಳಿ, ಮಾರ್ಚ್ 1: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಎಟಿಎಂ ಕೊಠಡಿಗೆ ನುಗ್ಗಿದ ಖದೀಮರು, ಯಂತ್ರವನ್ನು ಕಟ್ ಮಾಡಿ 30 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದಾರೆ. ಸೂಲಿಬೆಲೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗೆ ನುಗ್ಗಿದ ಕಳ್ಳರು, ಸಿಸಿ ಕ್ಯಾಮರಾಗಳಿಗೆ ಬ್ಲ್ಯಾಕ್​ ಸ್ಪ್ರೇ ಮಾಡಿದ್ದಾರೆ. ನಂತರ, ಗ್ಯಾಸ್​ ಕಟರ್​ ಬಳಸಿ ಎಟಿಎಂ ಮಷಿನ್ ಕಟ್​ ಮಾಡಿ ಹಣ ಕಳವು ಮಾಡಿದ್ದಾರೆ. ಮೈಗೆ, ಮುಖಕ್ಕೆ ಬೆಡ್​ಶೀಟ್​ ಮುಚ್ಚಿಕೊಂಡು ಬಂದಿದ್ದ ಕಳ್ಳರ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More