AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈರಿಗಳು ಹೆಚ್ಚಿದ್ದಾರೆ, ಕುಗ್ಗಬೇಡ: ಕಟೀಲ್​ಗೆ ಎಚ್ಚರಿಕೆ ನೀಡಿದ್ದ ಅಜ್ಜಾವರ ವಿಷ್ಣುಮೂರ್ತಿ ದೈವ

ವೈರಿಗಳು ಹೆಚ್ಚಿದ್ದಾರೆ, ಕುಗ್ಗಬೇಡ: ಕಟೀಲ್​ಗೆ ಎಚ್ಚರಿಕೆ ನೀಡಿದ್ದ ಅಜ್ಜಾವರ ವಿಷ್ಣುಮೂರ್ತಿ ದೈವ

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: Rakesh Nayak Manchi|

Updated on:Mar 14, 2024 | 1:54 PM

Share

ದಕ್ಷಿಣ ಕನ್ನಡ ಜಿಲ್ಲೆಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈ ನಡುವೆ, ಒಂದು ವಾರದ ಹಿಂದೆಯೇ ಕಟೀಲ್​ಗೆ ಸುಳ್ಯ ತಾಲೂಕಿನ ಅಜ್ಜಾವರದ ವಿಷ್ಣುಮೂರ್ತಿ ದೈವ ಎಚ್ಚರಿಕೆ ನೀಡಿತ್ತು ಎನ್ನುವ ವಿಚಾರ ಇದೀಗ ತಿಳಿದುಬಂದಿದೆ. ಅಲ್ಲದೆ, ಕುರುಕ್ಷೇತ್ರದಲ್ಲಿ ಅರ್ಜನನಿಗೆ ಕೃಷ್ಣ ನೆರವಾದರಂತೆ ನಾನು ನಿನ್ನನ್ನು ಕೊಂಡೊಯ್ಯುತ್ತೇನೆ ಎಂದು ಅಭಯ ನೀಡಿದೆ.

ಮಂಗಳೂರು, ಮಾ.14: “ನಿನಗೆ ವೈರಿಗಳು ತುಂಬಾನೇ ಇದ್ದಾರೆ. ವೈರಿಗಳು ಎಷ್ಟಿದ್ದರೇನು ಕೊನೆಗೆ ಸತ್ಯ, ಧರ್ಮ ಮಾತ್ರ ಗೆಲ್ಲುವುದು. ಯಾವುದಕ್ಕೂ ಕುಗ್ಗಬೇಡ. ನೀನು ಹಿಂದುರುಗಿ ನೋಡಬೇಡ, ನಿನಗೆ ಮುಂದೊಂದು ದಿನ ಜಯವಿದೆ” ಎಂದು ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರಿಗೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ (Ajjawara) ಗ್ರಾಮದ ಮೇನಾಲದಲ್ಲಿ ಒಂದು ವಾರದ ಹಿಂದೆ ನಡೆದಿದ್ದ ವಯನಾಟ್ ಕುಲವನ್ ದೈವದ ನೇಮೋತ್ಸವದಲ್ಲಿ ವಿಷ್ಣುಮೂರ್ತಿ (Vishnumoorthy) ದೈವ ಎಚ್ಚರಿಕೆ ನೀಡಿತ್ತು. ಅಲ್ಲದೆ, “ಎಲ್ಲರಿಗೂ ವೈರಿಗಳಿದ್ದರು. ಅಣ್ಣ ತಮ್ಮಂದಿರೂ ವೈರಿಗಳಾಗಿದ್ದದ್ದುಂಟು. ಕುಂತಿಯದ್ದೂ, ಧೃತರಾಷ್ಟ್ರ, ಪಾಂಡುವಿನ ಮಕ್ಕಳು ಅಣ್ಣ ತಮ್ಮಂದಿರು. ಅಣ್ಣ ತಮ್ಮಂದಿರೂ ವೈರಿಗಳಾಗಿ ಬದಲಾದರು. ಅದರಲ್ಲಿ ಪಾರ್ಥ ಸರಿಯಾದ ಮಾರ್ಗದಲ್ಲಿ ಸಾಗಿದ. ಕುರುಕ್ಷೇತ್ರವಾಯಿತು. ಸತ್ಯ ಮಾತ್ರ ಗೆಲ್ಲುತ್ತದೆ. ಅಸತ್ಯ ಗೆಲ್ಲುವುದಿಲ್ಲ. ಧರ್ಮ ಗೆಲ್ಲುತ್ತದೆ. ಅಧರ್ಮ ಗೆಲ್ಲುವುದಿಲ್ಲ. ಸತ್ಯದ ಮಾರ್ಗದಲ್ಲಿ ಸಾಗಿ. ಕೃಷ್ಣನು ಪಾರ್ಥನಲ್ಲಿ ಹೇಳಿದಂತೆ ಕುರುಕ್ಷೇತ್ರ ಭೂಮಿಯಲ್ಲಿ ಕೃಷ್ಣನೇ ಸಾರಥಿಯಾಗಿ ನೇರವಾದ ಮಾರ್ಗದಲ್ಲಿ ಕೊಂಡೊಯ್ದಂತೆ ನಾನು ನಿನ್ನನ್ನು ಕೊಂಡೊಯ್ಯುವೆ” ಎಂದು ವಿಷ್ಣುಮೂರ್ತಿ ದೈವ ಕಟೀಲ್​ಗೆ ಅಭಯ ನೀಡಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published on: Mar 14, 2024 01:52 PM

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More