‘ದರ್ಶನ್ ಜೈಲಲ್ಲಿ ರೌಡಿಗಳಲ್ಲದೇ ಇನ್ಯಾರ ಜತೆ ಇರೋಕೆ ಸಾಧ್ಯ?’: ಸುಮಲತಾ ಸಮರ್ಥನೆ

Updated on: Aug 27, 2024 | 3:16 PM

ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ಗೆ ನಟೋರಿಯಸ್​ ರೌಡಿಗಳ ಸಹವಾಸ ಬೆಳೆದಿದೆ. ರೌಡಿಶೀಟರ್​ಗಳ ಜೊತೆ ದರ್ಶನ್​ ಇರುವ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್​ ಅವರು ಹೇಳಿಕೆ ನೀಡಿದ್ದಾರೆ. ದರ್ಶನ್​ ರೌಡಿಗಳ ಜೊತೆ ಇರುವುದನ್ನು ಸುಮಲತಾ ಸಮರ್ಥನೆ ಮಾಡಿಕೊಂಡಿದ್ದಾರೆ.

‘ಜೈಲಿನಲ್ಲಿ ಯಾರಪ್ಪಾ ಇರುತ್ತಾರೆ? ಜೊತೆಯಲ್ಲಿ ಓಡಾಡಲು, ಮಾತಾಡಲು ಜೈಲಲ್ಲಿ ಇನ್ಯಾರು ಸಿಕ್ತಾರೆ? ಅಲ್ಲಿ ಇರುವುದೇ ಕ್ರಿಮಿನಲ್ಸ್​’ ಎಂದು ಸುಮಲತಾ ಅಂಬರೀಷ್​ ಅವರು ಹೇಳಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನ ಪ್ರಮುಖ ಆರೋಪಿ ಆಗಿರುವ ದರ್ಶನ್​ ಅವರು ರೌಡಿಶೀಟರ್​ಗಳಾದ ವಿಲ್ಸನ್​ ಗಾರ್ಡನ್​ ನಾಗ, ಕುಳ್ಳ ಸೀನಾ ಮುಂತಾದವರ ಜೊತೆ ಇರುವ ಫೋಟೋ ವೈರಲ್​ ಆಗಿರುವುದಕ್ಕೆ ಸಂಬಂಧಿಸಿದಂತೆ ಸುಮಲತಾ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More