AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸೇರುವ ಮೊದಲು ಅಂಬರೀಶ್ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ಬಿಜೆಪಿ ಸೇರುವ ಮೊದಲು ಅಂಬರೀಶ್ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದ ಸುಮಲತಾ ಅಂಬರೀಶ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 05, 2024 | 11:58 AM

Share

ಮಂಡ್ಯದ ಪಕ್ಷೇತರ ಸಂಸದೆಯಾಗಿರುವ ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್ ನೀಡದಿದ್ದರೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದರು. ಆದರೆ ಬದಲಾಗಿರುವ ರಾಜ್ಯದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಟಿಕೆಟ್ ಅನ್ನು ಹೆಚ್ ಡಿ ಕುಮಾರಸ್ವಾಮಿಗೆ ನೀಡಿತು.

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ (Rebel Star Ambareesh) ಅವರ ನಿಧನದ ಬಳಿಕ ರಾಜಕಾರಣದಲ್ಲಿ ಸಕ್ರಿಯರಾದ ಸುಮಲತಾ ಅಂಬರೀಶ್ (Sumalatha Ambareesh) ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವ ನಾಯಕಿಯಾಗಿ ಬೆಳದಿದ್ದನ್ನು ಕನ್ನಡಿಗರು ನೋಡಿದ್ದಾರೆ. ರಾಜಕೀಯ ಬದುಕಿನಲ್ಲಿ ಅವರು ಯಾವುದೇ ನಿರ್ಧಾರ ತೆಗದುಕೊಳ್ಳುವ ಮೊಲು ಮತ್ತು ನಂತರ ಅವರು ನಗರದಲ್ಲಿರುವ ತಮ್ಮ ಪತಿಯ ಸ್ಮಾರಕಕ್ಕೆ ತೆರಳಿ ಪೂಜೆ (offers puja) ಸಲ್ಲಿಸುತ್ತಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಅವರು ಬಹಳ ಗೊಂದಲದಲ್ಲಿದ್ದರು. ಮಂಡ್ಯದ ಪಕ್ಷೇತರ ಸಂಸದೆಯಾಗಿರುವ ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅವರು ಬಿಜೆಪಿ ಟಿಕೆಟ್ ನೀಡದಿದ್ದರೂ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದರು. ಆದರೆ ಬದಲಾಗಿರುವ ರಾಜ್ಯದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಟಿಕೆಟ್ ಅನ್ನು ಹೆಚ್ ಡಿ ಕುಮಾರಸ್ವಾಮಿಗೆ ನೀಡಿತು. ಆಗ ಮತ್ತಷ್ಟು ಗೊಂದಲಕ್ಕೀಡಾಗಿದ್ದ ಸುಮಲತಾ ಬಿಜೆಪಿ ವರಿಷ್ಟರೊಂದಿಗೆ ಮಾತುಕತೆ ನಡೆಸಿದ ಬಳಿಕ ಅಧಿಕೃತವಾಗಿ ಬಿಜೆಪಿ ಸೇರುವ ನಿರ್ಣಯ ಪ್ರಕಟಿಸಿದರು. ಇಂದು ಅವರು ಪಕ್ಷಕ್ಕೆ ಸೇಪರ್ಡಗೊಳ್ಳಲಿದ್ದು ಬಿಜೆಪಿ ಕಚೇರಿಗೆ ತೆರಳುವ ಮುನ್ನ ಅಂಬರೀಶ್ ಸ್ಮಾರಕಕ್ಕೆ ಹೋಗಿ ಪೂಜೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಕಾರಣಗಳೇನು? ಇಲ್ಲಿವೆ ನೋಡಿ ಕೆಲ ಅಂಶಗಳು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.