Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

ರಾಜೇಶ್ ದುಗ್ಗುಮನೆ
|

Updated on: Apr 01, 2024 | 8:20 AM

ಸಂಸದೆ ಸುಮಲತಾ ಅಂಬರೀಷ್  ಅವರು ಈ ಬಾರಿ ಮಂಡ್ಯದಂದ ಸ್ಪರ್ಧೆ ಮಾಡುತ್ತಾರೋ ಅಥವಾ ಇಲ್ಲವೋ ಅನ್ನೋದು ಇನ್ನೂ ನಿರ್ಧಾರ ಆಗಿಲ್ಲ. ಏಪ್ರಿಲ್ 3ರಂದು ಮಂಡ್ಯದಲ್ಲಿ ದೊಡ್ಡ ಸಭೆ ಮಾಡಿ ತಮ್ಮ ನಿರ್ಧಾರ ತಿಳಿಸುವುದಾಗಿ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಹಾಲಿ ಸಂಸದೆ ಸುಮಲತಾ ಅಂಬರೀಷ್  (Sumalatha Ambareesh) ಅವರು ಈ ಬಾರಿ ಮಂಡ್ಯದಂದ ಸ್ಪರ್ಧೆ ಮಾಡುತ್ತಾರೋ ಅಥವಾ ಇಲ್ಲವೋ ಅನ್ನೋದು ಇನ್ನೂ ನಿರ್ಧಾರ ಆಗಿಲ್ಲ. ಏಪ್ರಿಲ್ 3ರಂದು ಮಂಡ್ಯದಲ್ಲಿ ದೊಡ್ಡ ಸಭೆ ಮಾಡಿ ತಮ್ಮ ನಿರ್ಧಾರ ತಿಳಿಸುವುದಾಗಿ ಸುಮಲತಾ ಅಂಬರೀಷ್ ಹೇಳಿದ್ದಾರೆ. ಕಳೆದ ವರ್ಷ ಅವರ ಪರವಾಗಿ ದರ್ಶನ್ ಹಾಗೂ ಯಶ್ ಪ್ರಚಾರ ಮಾಡಿದ್ದರು. ಈ ಬಾರಿ ತಮ್ಮ ನಿರ್ಧಾರ ತಿಳಿಸುವಾಗ ದರ್ಶನ್ ಜೊತೆಯಲ್ಲಿ ಇರುವುದಾಗಿ ಸುಮಲತಾ ಅಂಬರೀಷ್ ಹೇಳಿದ್ದಾರೆ. ಅವರ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ