‘ಏಪ್ರಿಲ್ 3ಕ್ಕೆ ನಿರ್ಧಾರ ತಿಳಿಸುವೆ, ಅಂದು ದರ್ಶನ್ ನನ್ನ ಜೊತೆ ಇರ್ತಾರೆ’; ಸುಮಲತಾ

Updated on: Apr 01, 2024 | 8:20 AM

ಸಂಸದೆ ಸುಮಲತಾ ಅಂಬರೀಷ್  ಅವರು ಈ ಬಾರಿ ಮಂಡ್ಯದಂದ ಸ್ಪರ್ಧೆ ಮಾಡುತ್ತಾರೋ ಅಥವಾ ಇಲ್ಲವೋ ಅನ್ನೋದು ಇನ್ನೂ ನಿರ್ಧಾರ ಆಗಿಲ್ಲ. ಏಪ್ರಿಲ್ 3ರಂದು ಮಂಡ್ಯದಲ್ಲಿ ದೊಡ್ಡ ಸಭೆ ಮಾಡಿ ತಮ್ಮ ನಿರ್ಧಾರ ತಿಳಿಸುವುದಾಗಿ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಹಾಲಿ ಸಂಸದೆ ಸುಮಲತಾ ಅಂಬರೀಷ್  (Sumalatha Ambareesh) ಅವರು ಈ ಬಾರಿ ಮಂಡ್ಯದಂದ ಸ್ಪರ್ಧೆ ಮಾಡುತ್ತಾರೋ ಅಥವಾ ಇಲ್ಲವೋ ಅನ್ನೋದು ಇನ್ನೂ ನಿರ್ಧಾರ ಆಗಿಲ್ಲ. ಏಪ್ರಿಲ್ 3ರಂದು ಮಂಡ್ಯದಲ್ಲಿ ದೊಡ್ಡ ಸಭೆ ಮಾಡಿ ತಮ್ಮ ನಿರ್ಧಾರ ತಿಳಿಸುವುದಾಗಿ ಸುಮಲತಾ ಅಂಬರೀಷ್ ಹೇಳಿದ್ದಾರೆ. ಕಳೆದ ವರ್ಷ ಅವರ ಪರವಾಗಿ ದರ್ಶನ್ ಹಾಗೂ ಯಶ್ ಪ್ರಚಾರ ಮಾಡಿದ್ದರು. ಈ ಬಾರಿ ತಮ್ಮ ನಿರ್ಧಾರ ತಿಳಿಸುವಾಗ ದರ್ಶನ್ ಜೊತೆಯಲ್ಲಿ ಇರುವುದಾಗಿ ಸುಮಲತಾ ಅಂಬರೀಷ್ ಹೇಳಿದ್ದಾರೆ. ಅವರ ಹೇಳಿಕೆ ಸಾಕಷ್ಟು ಕುತೂಹಲ ಮೂಡಿಸಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More