ಮಂಡ್ಯ ಕ್ಷೇತ್ರದ ಟಿಕೆಟ್ ಬಿಜೆಪಿ ವರಿಷ್ಠರು ತನಗೆ ಮಾತ್ರ ಮೀಸಲಿಟ್ಟಿದ್ದಾರೆ ಎನ್ನುವಂತಿದೆ ಸುಮಲತಾ ಅಂಬರೀಶ್ ಮಾತಿನ ವರಸೆ

ಅವರಿಗೆ ವಿಶ್ವಾಸ ಇರೋದೇನೋ ನಿಜ ಆದರೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಮಗ್ಗುಲ ಮುಳ್ಳಾಗಿದ್ದಾರೆ. ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಡಿ ಅಂತ ಅವರ ಒಂದೇಸಮ ಬಿಜೆಪಿ ನಾಯಕರ ದುಂಬಾಲು ಬಿದ್ದಿದ್ದಾರೆ. ಈ ವಿಷಯವನ್ನು ಸುಮಲತಾ ಅವರಿಗೆ ಹೇಳಿದಾಗ, ತನಗಿಲ್ಲದ ಆತುರ ಮಾಧ್ಯಮದವರಿಗಿರುವಂತಿದೆ ಎನ್ನುತ್ತಾರೆ.

ಮಂಡ್ಯ ಕ್ಷೇತ್ರದ ಟಿಕೆಟ್ ಬಿಜೆಪಿ ವರಿಷ್ಠರು ತನಗೆ ಮಾತ್ರ ಮೀಸಲಿಟ್ಟಿದ್ದಾರೆ ಎನ್ನುವಂತಿದೆ ಸುಮಲತಾ ಅಂಬರೀಶ್ ಮಾತಿನ ವರಸೆ
|

Updated on: Mar 07, 2024 | 5:32 PM

ಮಂಡ್ಯ: ಮಂಡ್ಯದ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ನಗರದಲ್ಲಿ ಇವತ್ತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಆತ್ಮವಿಶ್ವಾಸದ ಮೂಟೆಯಾಗಿದ್ದರು. ಅವರ ಮಾತಿನ ವರಸೆ ಕೇಳುತ್ತಿದ್ದರೆ ಬಿಜೆಪಿ ವರಿಷ್ಠರು (BJP high command) ಈಗಾಗಲೇ ಅವರಿಗೆ ಟಿಕೆಟ್ ನೀಡಿದ್ದಾರೆ ಅನ್ನುವ ಹಾಗಿತ್ತು. ಖುದ್ದು ಬಿಜೆಪಿ ವರಿಷ್ಠರೇ ನಿಮ್ಮ ಬೆಂಬಲ ನಮಗೆ ಬೇಕು, ನಿಮ್ಮಿಂದಲೇ ಮಂಡ್ಯ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬರಬೇಕಿದೆ ಅಂತ ಹೇಳಿದ್ದಾರೆ. ಅವರು ಇಷ್ಟೆಲ್ಲ ಹೇಳಿದ ನಂತರವೂ ಟಿಕೆಟ್ ಸಿಗುತ್ತೋ ಇಲ್ಲವೋ ಅಂತ ಅನುಮಾನಪಟ್ಟರೆ ಹೇಗೆ? ನನಗಂತೂ ವಿಶ್ವಾಸವಿದೆ ಎಂದು ಸುಮಲತಾ ಹೇಳಿದರು. ಅವರಿಗೆ ವಿಶ್ವಾಸ ಇರೋದೇನೋ ನಿಜ ಆದರೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಮಗ್ಗುಲ ಮುಳ್ಳಾಗಿದ್ದಾರೆ. ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಿಟ್ಟುಕೊಡಿ ಅಂತ ಅವರ ಒಂದೇಸಮ ಬಿಜೆಪಿ ನಾಯಕರ ದುಂಬಾಲು ಬಿದ್ದಿದ್ದಾರೆ. ಈ ವಿಷಯವನ್ನು ಸುಮಲತಾ ಅವರಿಗೆ ಹೇಳಿದಾಗ, ತನಗಿಲ್ಲದ ಆತುರ ಮಾಧ್ಯಮದವರಿಗಿರುವಂತಿದೆ, ತಾನೇ ಇಷ್ಟು ತಾಳ್ಮೆಯಿಂದಿರುವಾಗ ಮಾಧ್ಯಮಗಳಿಗ್ಯಾಕೆ ಧಾವಂತ? ಆಷ್ಟಕ್ಕೂ ಇನ್ನೊಂದು ವಾರವಷ್ಟೇ, ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಅನ್ನೋದು ಗೊತ್ತಾಗಿಬಿಡುತ್ತದೆ, ಕೊಂಚ ತಾಳ್ಮೆಯಿಂದಿರಿ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಪ್ರಧಾನಿ ಮೋದಿ ವಿಶ್ವವೇ ಮೆಚ್ಚಿರುವ ಅಭಿವೃದ್ಧಿಯ ಹರಿಕಾರ, ಅವರೊಂದಿಗೆ ಕೆಲಸ ಮಾಡಿದರೆ ಮಂಡ್ಯ ಸಹ ಭಾರೀ ಪ್ರಗತಿ ಕಾಣಲಿದೆ: ಸುಮಲತಾ ಅಂಬರೀಶ್

Follow us
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು