AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜೀನಾಮೆ ಬಗ್ಗೆ ಸುಮಲತಾ ಶಾಕಿಂಗ್ ಮಾತು; ಇಲ್ಲಿದೆ ವಿಡಿಯೋ

ರಾಜಕೀಯ ತುಂಬ ನಡೆಯುತ್ತಿದೆ. ಮಳೆ ಬಾರದೇ ಇದ್ದರೇ ಕುಡಿಯುವ ನೀರಿಗೆ ಏನು ಮಾಡಬೇಕು ಗೊತ್ತಿಲ್ಲ. ಸರ್ಕಾರದ ಪರ ನಿಲ್ಲಲು ನಾನು ರೆಡಿ ಇದ್ದೇನೆ. ನಾನು ಎಂಪಿ ಆಗಿ ಏನು ಮಾಡಬೇಕು ಮಾಡುತ್ತಿದ್ದೇನೆ. ರೈತರಿಗೆ ಆಗಿರುವ ನಷ್ಟವನ್ನು ಸರ್ಕಾರ ಬರಿಸಬೇಕಿದೆ.

ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 21, 2023 | 9:26 PM

Share

ಮಂಡ್ಯ, ಸೆ.21: ಜಿಲ್ಲೆಯ ಏಳು ತಾಲೂಕು ತೀವ್ರ ಬರ ಇದೆ. ಸುಮಲತಾ ರಾಜೀನಾಮೆ ವಿಚಾರ ಮಾತನಾಡುವ ಸಮಯವಲ್ಲ ಇದು ಎಂದು ಮಂಡ್ಯ(Mandya)ದಲ್ಲಿ ಸಂಸದೆ ಸುಮಲತಾ(Sumalata)ಹೇಳಿದರು. ‘ರಾಜಕೀಯ ತುಂಬ ನಡೆಯುತ್ತಿದೆ. ಮಳೆ ಬಾರದೇ ಇದ್ದರೇ ಕುಡಿಯುವ ನೀರಿಗೆ ಏನು ಮಾಡಬೇಕು ಗೊತ್ತಿಲ್ಲ. ಸರ್ಕಾರದ ಪರ ನಿಲ್ಲಲು ನಾನು ರೆಡಿ ಇದ್ದೇನೆ. ನಾನು ಎಂಪಿ ಆಗಿ ಏನು ಮಾಡಬೇಕು ಮಾಡುತ್ತಿದ್ದೇನೆ. ರೈತರಿಗೆ ಆಗಿರುವ ನಷ್ಟವನ್ನು ಸರ್ಕಾರ ಬರಿಸಬೇಕಿದೆ. ಜನರು ಮುಗ್ದರು ಇದ್ದು, ಅವರಿಗೆ ಮಾಹಿತಿ‌ ಇರಲ್ಲ. ರಾಜ್ಯ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶ ಮಾಡುವ ಸಂದರ್ಭ ಇಲ್ಲ. ಮಂಡ್ಯ ಜಿಲ್ಲೆಯ ಜನ ನನಗೆ ಮತ ಹಾಕಿದ್ದಾರೆ. ನನಗೆ ಜವಬ್ದಾರಿ ಕೊಟ್ಟಿದ್ದಾರೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಮುಂದಿನ ದಿನಗಳಲ್ಲಿ ರಾಜೀನಾಮೆ ನೀಡಲು ಯೋಚನೆ ಮಾಡುವುದಿಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More