ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರ ಏನನ್ನೂ ಯೋಚಿಸಿಲ್ಲ : ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Apr 11, 2025 | 1:57 PM

ರಾಜ್ಯ ಗುತ್ತಿಗೆಗದಾರರು ಬಿಲ್ ಪಾವತಿಯಾಗದಿರುವ ಬಗ್ಗೆ ಮತ್ತು ಹಿಂದಿನ ಸರ್ಕಾರಕ್ಕಿಂತಲೂ ಈ ಸರ್ಕಾರದಲ್ಲಿ ಹೆಚ್ಚಿನ ಕಮೀಷನ್​ಗೆ ಡಿಮ್ಯಾಂಡ್ ಮಾಡಲಾಗುತ್ತಿದೆ ಎಂದು ಆರೋಪಿಸುತ್ತಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಸೋಮಣ್ಣ, ಕಾಂಗ್ರೆಸ್ ಕುಮ್ಮಕ್ಕಿನಿಂದ ತಮ್ಮ ಸರ್ಕಾರದ ವಿರುದ್ಧ ವೃಥಾ ದೋಷಾರೋಪಣೆ ಮಾಡಿ ಅಧಿಕಾರದಿಂದ ಇಳಿಸಿದರು, ಈಗ ಕಾಂಗ್ರೆಸ್ ಸರ್ಕಾರವನ್ನೂ ಇಳಿಸುತ್ತಾರೆ ಎಂದರು.

ಹುಬ್ಬಳ್ಳಿ, ಏಪ್ರಿಲ್ 11: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವ ವಿ ಸೋಮಣ್ಣ, ರಾಜ್ಯ ಸರ್ಕಾರವನ್ನು (state government) ಒಂದು ದಿವಾಳಿಯೆದ್ದ ಅಂಗಡಿಗೆ ಹೋಲಿಸಿ ಗೇಲಿ ಮಾಡಿದರು. ಸರ್ಕಾರದಲ್ಲಿ ಹಣವೇ ಇಲ್ಲ, ಜನರ ಒಂದು ಚಿಕ್ಕ ಸಮಸ್ಯೆಗೂ ಸ್ಪಂದಿಸುವ ಶಕ್ತಿಯನ್ನು ಸರ್ಕಾರ ಉಳಿಸಿಕೊಂಡಿಲ್ಲ ಎಂದು ಹೇಳಿದ ಸೋಮಣ್ಣ, ಬೇಸಿಗೆ ಬರುತ್ತಿದೆ ರಾಜ್ಯದ ಹಲವಾರು ಭಾಗಗಳಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯಲು ನೀರಿಲ್ಲದಂತ ಸ್ಥಿತಿ ನಿರ್ಮಾಣವಾಗಿದೆ, ಸರ್ಕಾರ ಈ ನಿಟ್ಟಿನಲ್ಲಿ ಪರಿಹಾರ ಯೋಜನೆಗಳ ಬಗ್ಗೆ ಯೋಚಿಸಿಯೂ ಇಲ್ಲ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಜನರ ಗಮನವನ್ನು ಬೇರೆಡೆ ತಿರುಗುಸುವಲ್ಲಿ ನಿಷ್ಣಾತರು ಎಂದು ಸೋಮಣ್ಣ ಹೇಳಿದರು.

ಇದನ್ನೂ ಓದಿ:  ಬಸನಗೌಡ ಯತ್ನಾಳ್ ವಿಷಯದಲ್ಲಿ ಹೆಚ್ಚು ಮಾತಾಡಲಿಚ್ಛಿಸದ ಕೇಂದ್ರ ಸಚಿವ ವಿ ಸೋಮಣ್ಣ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.