ಶಿರೂರು ಗುಡ್ಡ ಕುಸಿತ ಕಾರ್ಯಚರಣೆ ಯಶಸ್ವಿಯಾಗದಿದ್ದಕ್ಕೆ ಮುಳುಗು ತಜ್ಞ ಭಾವುಕ

ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು ಸಿಕ್ಕಿಲ್ಲ. ಹೀಗಾಗಿ ಸದ್ಯಕ್ಕೆ ಕಾರ್ಯಚರಣೆ ಸ್ಥಗಿತಗೊಳಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ. ಇನ್ನು ಶೋಧ ಕಾರ್ಯಾಚರಣೆ ಯಶಸ್ವಿಯಾಗದಿರುವುದಕ್ಕೆ ತಜ್ಞ ಈಶ್ವರ ಮಲ್ಫೆ ಬೇಸರ ವ್ಯಕ್ತಪಡಿಸಿದ್ದಾರೆ.

ಶಿರೂರು ಗುಡ್ಡ ಕುಸಿತ ಕಾರ್ಯಚರಣೆ ಯಶಸ್ವಿಯಾಗದಿದ್ದಕ್ಕೆ ಮುಳುಗು ತಜ್ಞ ಭಾವುಕ
| Updated By: ರಮೇಶ್ ಬಿ. ಜವಳಗೇರಾ

Updated on: Jul 28, 2024 | 5:48 PM

ಕಾರವಾರ, (ಜುಲೈ 28): ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿರುವ ಮೂವರು ಇನ್ನು ಸಿಕ್ಕಿಲ್ಲ. ಎಸ್​ಡಿಆರ್​​ಎಫ್, ಎನ್​ಡಿಆರ್​ಎಫ್​, ಡ್ರೋಣ್, ಹೆಲಿಕಾಪ್ಟರ್​, ಮುಳುಗು ತಜ್ಞರು ಸೇರಿ ಹಲವರು ಕಳೆದ 13 ದಿನಗಳಿಂದ ಶೋಧ ಕಾರ್ಯಚರಣೆ ನಡೆಸಿದರೂ ಸಹ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ. ಒಂದೆಡೆ ನದಿಯಲ್ಲಿ ನೀರು ರಭಸವಾಗಿ ಹರಿಯುತ್ತಿದ್ದರಿಂದ ನದಿಯೊಳಗೆ ಹೋಗಲು ಸ್ಕೂಬಾ ಡೈ ತಂಡಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ಕಾರ್ಯಚರಣೆ ಸ್ಥಗಿತಗೊಳಿಸಲು ಜಿಲ್ಲಾಡಳಿತ ತೀರ್ಮಾನಿಸಿದೆ.

ಇನ್ನು ಶೋಧ ಕಾರ್ಯಾಚರಣೆ ಯಶಸ್ವಿಯಾಗದಿರುವುದಕ್ಕೆ ಮುಳುಗು ತಜ್ಞ ಈಶ್ವರ ಮಲ್ಪೆ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಈ ಹಿಂದೆ ಮಾಡಿದ ಬಹಳಷ್ಟು ಕಾರ್ಯಾಚಾರಣೆ ಯಶಸ್ಸು ಆಗಿದೆ. ಆದ್ರೆ, ಇಂದಿನ ಶೋಧ ಕಾರ್ಯಾಚರಣೆ ಯಶಸ್ವಿಯಾಗದಿರುವುದರಿಂದ ದುಃಖವಾಗಿದೆ. ನಿರಂತರ ಮಳೆಯಿಂದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ನದಿ ನೀರಿನ ವೇಗ ಹೆಚ್ಚಿದೆ, ಕೆಸರುಮಯವಾಗಿದ್ದರಿಂದ ಸಕ್ಸಸ್ ಆಗಿಲ್ಲ. ಗಂಗಾವಳಿ ನದಿಯಲ್ಲಿ ಶೋಧ ಕಾರ್ಯಾಚರಣೆ ಯಶಸ್ಸು ಕಾಣಲಿಲ್ಲ. ನಾನು ನದಿಗೆ ಇಳಿದಾಗ ಬಂಡೆಗಲ್ಲು, ಮಣ್ಣು ಬಿಟ್ಟು ಬೇರೆ ಕಾಣಲಿಲ್ಲ. ಇಂದು ಶೋಧ ನಡೆಸಿದ ಪಾಯಿಂಟ್​ನಲ್ಲಿ ಆಲದ ಮರ ಸಿಕ್ಕಿದೆ. ನೀರಿನ ವೇಗ ಹೆಚ್ಚಾಗಿರುವುದರಿಂದ ನದಿ ಒಳಗೆ ಇರಲು ಆಗಲಿಲ್ಲ. ಕೆಸರು ನೀರು ಇರುವ ತನಕ ಕಾರ್ಯಾಚರಣೆ ಮಾಡುವುದು ಕಷ್ಟ. ನಾನು ನದಿ ಒಳಗೆ ಎಷ್ಟೇ ಇಳಿದರೂ ಸರಿಯಾಗಿ ಏನೂ ಕಾಣಲಿಲ್ಲ. ನದಿ ನೀರು ಕೆಸರುಮಯವಾಗಿರುವುದರಿಂದ ಸರಿಯಾಗಿ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶಿರೂರು ಗುಡ್ಡ ಕುಸಿತ: 13 ದಿನವಾದರೂ ಸಿಗದ ನಾಪತ್ತೆಯಾದವರ ಸುಳಿವು, ಕಾರ್ಯಾಚರಣೆ ಸ್ಥಗಿತಗೊಳಿಸಲು ನಿರ್ಧಾರ

Follow us
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್