ಸಿಪಿ ಯೋಗೇಶ್ವರ್ ಸಂಬಂಧಿ ರಿಯಲ್ಟರ್ ಮಹದೇವಯ್ಯ ಹತ್ಯೆಗೆ ಸುಪಾರಿ ನೀಡಲಾಗಿತ್ತೇ?

ಅರುಣ್​ ಕುಮಾರ್​ ಬೆಳ್ಳಿ

Updated on: Dec 04, 2023 | 6:29 PM

ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯ ಅವರನ್ನು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರಬಹುದೆಂದು ಅನುಮಾನಿಸಲಾಗುತ್ತಿದೆ. ಅವರ ಹತ್ಯೆ ನಡೆಸಲು ಸುಪಾರಿ ನೀಡಲಾಗಿತ್ತು ಎಂಬ ಅಂಶ ಪೊಲೀಸರ ಗಮನಕ್ಕೆ ಬಂದಿದೆ. ಅರಣ್ಯ ಇಲಾಖೆಯ ನೆರವಿನಿಂದ ಪೊಲೀಸರು ರಾಮಾಪುತದ ಕಾಡು ಪ್ರದೇಶದಲ್ಲಿ ಮಹಾದೇವಯ್ಯ ಅವರ ಶವ ಪತ್ತೆ ಮಾಡಿದ್ದಾರೆ.

ಚಾಮರಾಜನಗರ: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ (CP Yogeshwar) ಅವರ ಬಾವ ರಿಯಲ್ಟರ್ ಮಹದೇವಯ್ಯ (Mahadevaiah) ನಾಪತ್ತೆಯಾಗಿದ್ದನ್ನು ಮೂರು ದಿನಗಳ ಹಿಂದೆ ನಾವು ವರದಿ ಮಾಡಿದ್ದೆವು. ಆದರೆ ಇಂದು ಅವರು ಶವವಾಗಿ ಪತ್ತೆಯಾಗಿದ್ದಾರೆ. ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ (Ramapur) ಬಳಿಯ ನಿರ್ಜನ ಪ್ರದೇಶದಲ್ಲಿ ಅವರ ರಕ್ತಸಿಕ್ತ ದೇಹ ಮೂಟೆಯೊಂದರಲ್ಲಿ ಪತ್ತೆಯಾಗಿದೆ. ಅವರ ತಲೆಮೇಲೆ ಕಲ್ಲಿ ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಹಂತಕರು ಮಹದೇವಯ್ಯರನ್ನು ಅವರ ಕಾರಲ್ಲೇ ಕಿಡ್ನ್ಯಾಪ್ ಮಾಡಿದ್ದರು. ಕೊಲೆ ನಡೆದ ಸ್ಥಳದಿಂದ ಸುಮಾರು 6 ಕಿಲೋಮೀಟರ್ ದೂರ ಅವರ ದೇಹ ಬಿಸಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಮಾಪುರದಲ್ಲಿರುವ ಅಂಗಡಿಯೊಂದರ ಮುಂದೆ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಅವರ ಕಾರು ಓಡಾಡಿದ ದೃಶ್ಯಗಳು ಸೆರೆಯಾಗಿವೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.