ಯಾದಗಿರಿಯಲ್ಲಿ ಮೂಢನಂಬಿಕೆ ಜೀವಂತ! ದೆವ್ವ ಬಿಡಿಸಲು ಯುವಕನನ್ನು ಅರೆಬೆತ್ತಲೆಗೊಳಿಸಿ ಥಳಿಸಿದ ಜನ

Edited By: ಕಿರಣ್ ಹನುಮಂತ್​ ಮಾದಾರ್

Updated on: Oct 29, 2023 | 3:39 PM

ಯಾದಗಿರಿ(Yadagiri) ನಗರದ ಅಂಬೇಡ್ಕರ್ ವೃತ್ತದ ಬಳಿ ದೆವ್ವ ಬಿಡಿಸುವ ನೆಪದಲ್ಲಿ ಯುವಕನನ್ನು ಅರೆಬೆತ್ತಲೆಗೊಳಿಸಿ, ರಸ್ತೆ ಮಧ್ಯೆದಲ್ಲಿ ಕೈ-ಕಾಲು ಕಟ್ಟಿ ಸಂಬಂಧಿಕರು ಹಾಗೂ ಜನರು ಹಿಗ್ಗಾಮುಗ್ಗಾ ಮನಸೋ ಇಚ್ಛೆ ಹೊಡೆದಿದ್ದಾರೆ. ಮುಂದುವರೆದ ತಂತ್ರಜ್ಞಾನ ಯುಗದಲ್ಲಿಯೂ ಇಂತಹ ಮೂಡಾಚರಣೆ ಇನ್ನೂ ನಿಂತಿಲ್ಲ.

ಯಾದಗಿರಿ, ಅ.29: ಮೂಢನಂಬಿಕೆಯಿಂದ ಹೊರ ಬಂದು ಕಂಪ್ಯೂಟರ್​ ಯುಗದಲ್ಲಿದ್ದರು, ಕೆಲವೊಂದು ಕಡೆಗಳಲ್ಲಿ ಇನ್ನೂ ಜೀವಂತವಾಗಿದೆ. ಅದಕ್ಕೆ ಉತ್ತಮ ಉದಾಹರಣೆ ಎಂಬಂತೆ ಯಾದಗಿರಿ(Yadagiri) ನಗರದ ಅಂಬೇಡ್ಕರ್ ವೃತ್ತದ ಬಳಿ ದೆವ್ವ ಬಿಡಿಸುವ ನೆಪದಲ್ಲಿ ಯುವಕನನ್ನು ಅರೆಬೆತ್ತಲೆಗೊಳಿಸಿ, ರಸ್ತೆ ಮಧ್ಯೆದಲ್ಲಿ ಕೈ-ಕಾಲು ಕಟ್ಟಿ ಸಂಬಂಧಿಕರು ಹಾಗೂ ಜನರು ಹಿಗ್ಗಾಮುಗ್ಗಾ ಮನಸೋ ಇಚ್ಛೆ ಹೊಡೆದಿದ್ದಾರೆ. ಮುಂದುವರೆದ ತಂತ್ರಜ್ಞಾನ ಯುಗದಲ್ಲಿಯೂ ಇಂತಹ ಮೂಡಾಚರಣೆ ಇನ್ನೂ ನಿಂತಿಲ್ಲ. ನಂತರ ಸ್ಥಳಕ್ಕೆ ಯಾದಗಿರಿ ಪೋಲಿಸರು ಭೇಟಿ ನೀಡಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಈ ಘಟನೆ ಯಾದಗಿರಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Ameen Sab

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿತ್ತಿದ್ದೆನೆ. ಬೆಂಗಳೂರಿನಿಂದ ಮಾಧ್ಯಮ ವೃತ್ತಿಯನ್ನ ಆರಂಬಿಸಿದ್ದು ಎರಡು ವರ್ಷಗಳ ಕಾಲ ಬೆಂಗಳೂರಿನಲ್ಲಿ ಮೆಟ್ರೊ ರಿಪೋರ್ಟರ್ ಆಗಿ ಕೆಲಸ‌ ನಿರ್ವಹಿದ್ದೆನೆ. ಸದ್ಯ ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎಂಟು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದೆನೆ.. ನನ್ನ ಹವ್ಯಾಸ ಕ್ರಿಕೆಟ್ ಆಡೋದು,ಮಾನವೀಯ ಮೌಲ್ಯ ಮೌಲ್ಯಯುಳ್ಳ ಸುದ್ದಿಗಳನ್ನ ಮಾಡೋದು.

Read More