D Sudhakar: ಹಿರಿಯೂರು ಶಾಸಕ ಡಿ ಸುಧಾಕರ್​ಗೆ ಸಚಿವ ಸ್ಥಾನ ಆಗ್ರಹಿಸಿ ಬೆಂಬಲಿಗರಿಂದ ಸಿಎಂ ಸಿದ್ದರಾಮಯ್ಯ ಕಾರು ಅಡ್ಡಗಟ್ಟುವ ಪ್ರಯತ್ನ!

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2023 | 11:14 AM

ಹಿರಿಯೂರು ಶಾಸಕ ಡಿ ಸುಧಾಕರ್ ಬೆಂಬಲಿಗರು ಮುಖ್ಯಮಂತ್ರಿಗಳ ಕಾರನ್ನು ಘೇರಾವ್ ಮಾಡುವ ಪ್ರಯತ್ನ ಮಾಡಿದರು.

ಬೆಂಗಳೂರು: ಸಚಿವ ಸ್ಥಾನ ಯಾರಿಗೆ ಬೇಕಿಲ್ಲ? ಎಲ್ಲರಿಗೂ ಬೇಕು. ಆದರೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ 33 ಸಚಿವರಿಗಷ್ಟೇ ಸ್ಥಾನ ಲಭ್ಯವಾಗಲಿದೆ. ಹಾಗಾಗೇ ಆಯ್ಕೆಯಾಗಿರುವ ಎಲ್ಲಅ ಸದಸ್ಯರು ಮಂತ್ರಿಗಿರಿ ಬೇಕು ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮೇಲೆ ತಮ್ಮ ಬೆಂಬಲಿಗರ ಮೂಲಕ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಹಿರಿಯೂರು ಶಾಸಕ ಡಿ ಸುಧಾಕರ್ (D Sudhakar) ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದ ಎದುರು ಜಮಾಯಿಸಿ ಸಚಿವ ಸ್ಥಾನಕ್ಕಾಗಿ ಘೋಷಣೆಗಳನ್ನು ಕೂಗುತ್ತಾ ಆಗ್ರಹಿಸಿದರು ಮತ್ತು ಮುಖ್ಯಮಂತ್ರಿಗಳ ಕಾರನ್ನು ಘೇರಾವ್ ಮಾಡುವ ಪ್ರಯತ್ನ ಕೂಡ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.