Siddaramaiah: ನಿಯೋಜಿತ ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ದಂಡು, ಜಾನಪದ ಹಾಡುಗಳಿಂದ ಗುಣಗಾನ

Updated on: May 20, 2023 | 11:03 AM

‘ಸಿದ್ರಾಮಣ್ಣ ಇರುವಾಗ ಬೇರೆ ಮುಖ್ಯಮಂತ್ರಿ ಯಾಕೆ ಬೇಕಣ್ಣ...’ ಅಂತ ಹಾಡು ಸಾಗುತ್ತದೆ. ಕೆಲ ಅಭಿಮಾನಿಗಳಿಂದ ಸಿಹಿ ಹಂಚುವ ಕೆಲಸವೂ ಜಾರಿಯಲ್ಲಿದೆ.

ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಕುಮಾರಕೃಪಾ ರಸ್ತೆಯಲ್ಲಿರುವ ಮನೆಮುಂದೆ ಅಭಿಮಾನಿಗಳ ದಂಡು ನೆರೆದಿದೆ. ಜಾನಪದ ಹಾಡುಗಾರ (folk singers) ತಂಡವೊಂದು ಸಹ ಅಲ್ಲಿಗೆ ಆಗಮಿಸಿದ್ದು, ಸಿದ್ದರಾಮಯ್ಯನವರ ಮೇಲೆ ಗೀತೆಗಳನ್ನು ರಚಿಸಿ ಹಾಡುತ್ತಿದ್ದಾರೆ. ‘ಸಿದ್ರಾಮಣ್ಣ ಇರುವಾಗ ಬೇರೆ ಮುಖ್ಯಮಂತ್ರಿ ಯಾಕೆ ಬೇಕಣ್ಣ…’ ಅಂತ ಹಾಡು ಸಾಗುತ್ತದೆ. ಕೆಲ ಅಭಿಮಾನಿಗಳಿಂದ ಸಿಹಿ ಹಂಚುವ ಕೆಲಸವೂ ಜಾರಿಯಲ್ಲಿದೆ. ಸಿದ್ದರಾಮಯ್ಯ ದೆಹಲಿಯಿಂದ ಬೆಂಗಳೂರಿಗೆ ಈಗಾಗಲೇ ಆಗಮಿಸಿದ್ದು ಬೆಳಗ್ಗೆ 11 ಗಂಟೆಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More