ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ಹಿನ್ನಡೆ
ಜಾಮೀನು ಅರ್ಜಿ ಪುನರ್ಪರಿಶೀಲನೆ ಮಾಡುವಂತೆ ಕೋರಿ ಪವಿತ್ರಾ ಗೌಡ ಅವರು ಸುಪ್ರೀಂಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ. ದರ್ಶನ್ ಅವರು ಅರ್ಜಿ ಹಾಕಿದರೂ ಇದೇ ಸ್ಥಿತಿ ಬರುತ್ತದೆ ಎಂದು ಹೇಳಲಾಗುತ್ತಾ ಇದೆ. ಆ ಬಗ್ಗೆ ಇಲ್ಲಿದೆ ವಿವರ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ ಅವರು ಮತ್ತೆ ಜೈಲು ಸೇರಿದ್ದಾರೆ. ಅವರು ಎ1 ಆರೋಪಿ ಆದರೆ, ದರ್ಶನ್ ಎ2 ಆರೋಪಿ ಆಗಿದ್ದಾರೆ. ಈ ಮೊದಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ವಜಾ ಮಾಡಿತ್ತು. ಇದನ್ನು ಪುನರ್ ಪರಿಶೀಲನೆ ಮಾಡುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠಕ್ಕೆ ಪವಿತ್ರಾ ಮನವಿ ಮಾಡಿದ್ದರು. ಆದರೆ, ಇದನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪರ್ದಿವಾಲ್ ಮತ್ತು ಆರ್. ಮಹಾದೇವನ್ ಅವರ ಪೀಠ ಅರ್ಜಿ ವಜಾ ಮಾಡಿದೆ.
‘ನಾವು ತೀರ್ಪು ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಆ ಬಳಿಕವೇ ಆದೇಶ ನೀಡಿದ್ದೆವೆ. ಮತ್ತೋಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಇದರಿಂದ ಅವರಿಗೆ ದೊಡ್ಡ ಹಿನ್ನಡೆ ಆಗಿದೆ. ಹೀಗಾಗಿ, ಮತ್ತೊಂದು ಬಾಗಿಲು ಕೂಡ ಮುಚ್ಚಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ನಡುರಸ್ತೆಯಲ್ಲಿ ಇಬ್ಬರು ಕಾಲೇಜು ಹುಡುಗಿಯರಿಗೆ ಲಿಪ್ ಕಿಸ್ ಮಾಡಿದ ಯುವಕ

