ಶೃಂಗೇರಿ ಮರುಮತ ಎಣಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ: ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್

Updated on: May 12, 2026 | 10:50 AM

ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಬೆಂಗಳೂರು, ಮೇ 12: ಶೃಂಗೇರಿ ಕ್ಷೇತ್ರದ ಮರುಮತ ಎಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಬಿಜೆಪಿಯ ಜೀವರಾಜ್ ಅವರ ಗೆಲುವಿನ ಹಿನ್ನೆಲೆಯಲ್ಲಿ ಟಿ.ಡಿ. ರಾಜೇಗೌಡರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಸುಪ್ರೀಂ ಕೋರ್ಟ್, ಮರುಮತ ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜೀವರಾಜ್, ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಪ್ರಕರಣದ ಬಗ್ಗೆ ಅವಲೋಕಿಸಿ, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ ಮತ್ತು ಮುಂದಿನ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ನಿಗದಿಪಡಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದು ಕೇವಲ ಮಧ್ಯಂತರ ಆದೇಶವಾಗಿದ್ದು, ಅಂತಿಮ ತೀರ್ಪಲ್ಲ. ತಡೆಯಾಜ್ಞೆ ನೀಡಿದ ಕಾರಣ, ಹಾಲಿ ಶಾಸಕರೇ ಮುಂದುವರಿಯಲಿದ್ದಾರೆ. ರಾಜಕೀಯದಲ್ಲಿ ಗೆಲುವು-ಸೋಲು ಸಾಮಾನ್ಯ. ಕೋರ್ಟ್ ಆದೇಶವನ್ನು ಎದುರು ನೋಡುತ್ತಿದ್ದೇನೆ ಮತ್ತು ಅಕ್ಟೋಬರ್ 21ರ ನಂತರ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ಜೀವರಾಜ್ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us