AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೂಚನೆ

ಸುಷ್ಮಾ ಚಕ್ರೆ
|

Updated on: Jul 28, 2026 | 8:37 PM

Share

ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವ್ಯವಸ್ಥಿತ ಅಕ್ರಮಗಳ ವಿರುದ್ಧ ಜುಲೈ ೨೦ ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ನಡೆಸಿತು. ಗಾಯಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನೂ ಕೋರ್ಟ್ ನಡೆಸಿತು.

ನವದೆಹಲಿ, ಜುಲೈ 28: ಕಳೆದ ವಾರ ದೇಶಾದ್ಯಂತ ನಡೆದ ವಿದ್ಯಾರ್ಥಿ ಪ್ರತಿಭಟನೆಗಳ ವೇಳೆ ವಿದ್ಯಾರ್ಥಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಗಾಯಗಳಾಗಿರುವ ಆರೋಪಗಳ ಕುರಿತು ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಇಂದು ಅಭಿಪ್ರಾಯಪಟ್ಟಿದೆ. ಈ ತನಿಖೆಗಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸುವುದಾಗಿ ಸುಪ್ರೀಂ ಕೋರ್ಟ್ ಸುಳಿವು ನೀಡಿದ್ದು, ಈ ಕುರಿತು ಕೇಂದ್ರ ಸರ್ಕಾರ, ದೆಹಲಿ ಎನ್‌ಸಿಟಿ ಹಾಗೂ ಅಸ್ಸಾಂ, ಬಿಹಾರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಪ್ರತಿಕ್ರಿಯೆಯನ್ನು ಕೋರಿದೆ.

ಪ್ರತಿಭಟನಾಕಾರರ ವೈಯಕ್ತಿಕ ಮಾಹಿತಿ ಹಾಗೂ ಡಿಜಿಟಲ್ ಡೇಟಾವನ್ನು ಸುರಕ್ಷಿತವಾಗಿರಿಸಬೇಕು ಮತ್ತು ಸದ್ಯಕ್ಕೆ ಅದನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬಾರದು ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಪ್ರತಿಭಟನಾಕಾರರ ವೈಯಕ್ತಿಕ ವಿವರಗಳನ್ನು ಪ್ರಕಟಿಸಬಾರದು ಎಂದೂ ಕಟ್ಟುನಿಟ್ಟಾಗಿ ಹೇಳಿದೆ. ಈಗಾಗಲೇ ದಾಖಲಾಗಿರುವ ಎಫ್‌ಐಆರ್ ಆಧಾರದ ಮೇಲೆ ರಾಜ್ಯಗಳು ತನಿಖೆಯನ್ನು ಮುಂದುವರಿಸಬಹುದು. ಆದರೆ ಅಪರಾಧ ಹಿನ್ನೆಲೆಯಿಲ್ಲದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಠಿಣ ಅಥವಾ ಬಲವಂತದ ಕ್ರಮಗಳನ್ನು ಕೈಗೊಳ್ಳಬಾರದು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ವ್ಯವಸ್ಥಿತ ಅಕ್ರಮಗಳ ವಿರುದ್ಧ ಜುಲೈ ೨೦ ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಸರಣಿ ಅರ್ಜಿಗಳ ವಿಚಾರಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ನಡೆಸಿತು. ಗಾಯಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನೂ ಕೋರ್ಟ್ ನಡೆಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us