AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls 2023; ಟಿಕೆಟ್ ಸಿಗದ ನಿರಾಸೆಗಿಂತ ಸಿದ್ದರಾಮಯ್ಯನವರ ಪ್ರಯತ್ನ ವ್ಯರ್ಥವಾಗಿದ್ದು ಹೆಚ್ಚು ಬೇಸರ ಮೂಡಿಸಿದೆ: ಭಾವನಾ ರಾಮಣ್ಣ

Karnataka Assembly Polls 2023; ಟಿಕೆಟ್ ಸಿಗದ ನಿರಾಸೆಗಿಂತ ಸಿದ್ದರಾಮಯ್ಯನವರ ಪ್ರಯತ್ನ ವ್ಯರ್ಥವಾಗಿದ್ದು ಹೆಚ್ಚು ಬೇಸರ ಮೂಡಿಸಿದೆ: ಭಾವನಾ ರಾಮಣ್ಣ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 07, 2023 | 6:06 PM

Share

ಸಿದ್ದರಾಮಯ್ಯಗೆ ನಿವಾಸಕ್ಕೆ ಆಗಮಿಸಿದ್ದ ಭಾವನಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ಎಲ್ಲ ನಿರಾಶೆಯನ್ನು ಬದಿಗೊತ್ತಿ ಪಕ್ಷ ನೀಡುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ಹೇಳಿದರು.

ಬೆಂಗಳೂರು: ನಟಿ ಭಾವನಾ ರಾಮಣ್ಣ (Bhavana Ramanna) ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದು ನಿಮಗೆ ಗೊತ್ತಿದೆ. ಆದರೆ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar); ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭಾವನಾಗೆ ಟಿಕೆಟ್ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಟಿಕೆಟ್ ಸಿಗದ ಬಗ್ಗೆ ನಟಿಯಲ್ಲಿ ಅಸಮಾಧಾನವಿದೆಯಾದರೂ, ರಾಜ್ಯದ ನಾಯಕರ ಪ್ರಯತ್ನಗಳ ಹೊರತಾಗಿಯೂ ಅವಕಾಶ ಸಿಗದಿರುವುದು ಹೆಚ್ಚು ಬೇಸರ ತಂದಿದೆ ಎಂದು ಹೇಳುತ್ತಾರೆ. ಪಕ್ಷ ಸೇರುವಾಗಲೇ ಟಿಕೆಟ್ ಸಿಗಲಾರದು ಎಂಬ ಸುಳಿವನ್ನು ಸಿದ್ದರಾಮಯ್ಯ ನೀಡಿದ್ದರಂತೆ. ಇಂದು ಸಿದ್ದರಾಮಯ್ಯಗೆ ನಿವಾಸಕ್ಕೆ ಆಗಮಿಸಿದ್ದ ಭಾವನಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ಎಲ್ಲ ನಿರಾಶೆಯನ್ನು ಬದಿಗೊತ್ತಿ ಪಕ್ಷ ನೀಡುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ