Karnataka Assembly Polls 2023; ಟಿಕೆಟ್ ಸಿಗದ ನಿರಾಸೆಗಿಂತ ಸಿದ್ದರಾಮಯ್ಯನವರ ಪ್ರಯತ್ನ ವ್ಯರ್ಥವಾಗಿದ್ದು ಹೆಚ್ಚು ಬೇಸರ ಮೂಡಿಸಿದೆ: ಭಾವನಾ ರಾಮಣ್ಣ

Updated on: Apr 07, 2023 | 6:06 PM

ಸಿದ್ದರಾಮಯ್ಯಗೆ ನಿವಾಸಕ್ಕೆ ಆಗಮಿಸಿದ್ದ ಭಾವನಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ಎಲ್ಲ ನಿರಾಶೆಯನ್ನು ಬದಿಗೊತ್ತಿ ಪಕ್ಷ ನೀಡುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ಹೇಳಿದರು.

ಬೆಂಗಳೂರು: ನಟಿ ಭಾವನಾ ರಾಮಣ್ಣ (Bhavana Ramanna) ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದು ನಿಮಗೆ ಗೊತ್ತಿದೆ. ಆದರೆ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar); ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಭಾವನಾಗೆ ಟಿಕೆಟ್ ಕೊಡಿಸುವಲ್ಲಿ ವಿಫಲರಾಗಿದ್ದಾರೆ. ಟಿಕೆಟ್ ಸಿಗದ ಬಗ್ಗೆ ನಟಿಯಲ್ಲಿ ಅಸಮಾಧಾನವಿದೆಯಾದರೂ, ರಾಜ್ಯದ ನಾಯಕರ ಪ್ರಯತ್ನಗಳ ಹೊರತಾಗಿಯೂ ಅವಕಾಶ ಸಿಗದಿರುವುದು ಹೆಚ್ಚು ಬೇಸರ ತಂದಿದೆ ಎಂದು ಹೇಳುತ್ತಾರೆ. ಪಕ್ಷ ಸೇರುವಾಗಲೇ ಟಿಕೆಟ್ ಸಿಗಲಾರದು ಎಂಬ ಸುಳಿವನ್ನು ಸಿದ್ದರಾಮಯ್ಯ ನೀಡಿದ್ದರಂತೆ. ಇಂದು ಸಿದ್ದರಾಮಯ್ಯಗೆ ನಿವಾಸಕ್ಕೆ ಆಗಮಿಸಿದ್ದ ಭಾವನಾ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುತ್ತಾ, ಎಲ್ಲ ನಿರಾಶೆಯನ್ನು ಬದಿಗೊತ್ತಿ ಪಕ್ಷ ನೀಡುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ನಿಭಾಯಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More