Karnataka Budget Session: ರಾಯರೆಡ್ಡಿ ಮತ್ತು ಯತ್ನಾಳ್ ಮಾತಿನ ಜಗಳದ ನಡುವೆ ಜೋಕ್ ಕಟ್ ಮಾಡಿ ಎಲ್ಲರನ್ನೂ ನಗಿಸಿದ ಸುರೇಶ್ ಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 20, 2025 | 3:39 PM

ಒಂದು ಸಂದರ್ಭದಲ್ಲಿ ಬಸವರಾಜ ರಾಯರೆಡ್ಡಿ, ಯತ್ನಾಳ್ ಹೃದಯ ದೊಡ್ಡದು, ವಿಶಾಲ ಹೃದಯದವರು ಅಂತ ಹೇಳಿದಾಗ ಬಿಜೆಪಿ ಶಾಸಕ ಹಾಗೇನೂ ಇಲ್ಲ, ನಾನು ಸಂಕುಚಿತ ಹೃದಯದವನು ಅಂತ ಒಪ್ಕೋತೀನಿ ಅನ್ನುತ್ತಾರೆ. ಆಮೇಲೆ ಯತ್ನಾಳ್ ನಾವಿಬ್ಬರೂ ಉತ್ತರ ಕರ್ನಾಟಕದವರು ಅವರ ಹೆಸರಲ್ಲೂ ಬಸವರಾಜ ಇದೆ ನನ್ನ ಹೆಸರಲ್ಲೂ ಬಸವಣ್ಣ ಇದ್ದಾನೆ ಅಂತ ಹೇಳಿ ವಾಗ್ವಾದ ಮುಗಿಸುತ್ತಾರೆ.

ಬೆಂಗಳೂರು, ಮಾರ್ಚ್ 20: ಬಸವರಾಜ ರಾಯರೆಡ್ಡಿ (Basavaraj Rayareddy) ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಇಂದು ಸದನದಲ್ಲಿ ನಡೆದ ಹಾಸ್ಯ ಸ್ವರೂಪದ ಮಾತುಗಳು ಸದನ ಮತ್ತು ಸ್ಪೀಕರ್ ಅವರನ್ನು ನಗೆಗಡಲಲ್ಲಿ ಮುಳುಗಿಸಿದವು. ಯತ್ನಾಳ್ ಬಜೆಟ್ ಮೇಲೆ ಪ್ರಶ್ನೆಯೊಂದನ್ನು ಕೇಳಿದಾಗ ಎದ್ದು ನಿಲ್ಲುವ ರಾಯರೆಡ್ಡಿ ಬಜೆಟ್ ಮೇಲಿನ ಪ್ರಶ್ನೆಗಳಿಗೆ ತಾನು ಉತ್ತರಿಸಲು ಬರೋದಿಲ್ಲ, ತಾನು ಸರ್ಕಾರದ ಭಾಗವಲ್ಲ , ಐ ಯಾಮ್ ಟಾಕಿಂಗ್ ಅಬೌಟ್ ದಿ ಪ್ರೊಸೀಜರ್ ಅಂತ ಹೇಳಿದಾಗ ಯತ್ನಾಳ್ ಎದ್ದು ನಿಂತು ಐ ಯಾಮ್ ಆಲ್ಸೋ ಟಾಕಿಂಗ್ ಅಬೌಟ್ ಡಿ ಪ್ರೋಸೀಜರ್ ಅನ್ನುತ್ತಾರೆ. ಇಬ್ಬರ ನಡುವೆ ಮಾತಾಡುವ ಅವಕಾಶಕ್ಕಾಗಿ ಕಾದಾಟ ನಡೆದಾಗ ಹಿರಿಯ ಬಿಜೆಪಿ ಶಾಸಕ ಸುರೇಶ್ ಕುಮಾರ್ ಜೋಕೊಂದನ್ನು ಹೇಳಿ ಎಲ್ಲರನ್ನೂ ನಗಿಸುತ್ತಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಅಕ್ರಮ ಚಿನ್ನ ಸಾಗಾಟ ಕೇಸ್: ರನ್ಯಾ ತಂಟೆಗೆ ಹೋದ ಯತ್ನಾಳ್​ ವಿರುದ್ಧ ಎಫ್‌ಐಆರ್‌

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.