ಆರೋಪಿ ದರ್ಶನ್​ ಕೇಳಿದ್ದ ಸರ್ಜಿಕಲ್​ ಚೇರ್​ ತಂದುಕೊಟ್ಟ ಬಳ್ಳಾರಿ ಜೈಲಿನ ಅಧಿಕಾರಿಗಳು

|

Updated on: Sep 02, 2024 | 4:54 PM

ಬೆನ್ನು ನೋವು ಇರುವ ಕಾರಣದಿಂದ ಕುಳಿತುಕೊಳ್ಳುವುದು ದರ್ಶನ್​ಗೆ ಕಷ್ಟ ಆಗುತ್ತಿದೆ. ಹಾಗಾಗಿ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ವೈದ್ಯರ ವರದಿಯ ಪರಿಶೀಲನೆ ಬಳಿಕ ಅನುಮತಿ ಸಿಕ್ಕಿದ್ದರಿಂದ ಬಳ್ಳಾರಿ ಜೈಲಿನ ಅಧಿಕಾರಿಗಳು ದರ್ಶನ್​ಗೆ ಇಂದು (ಸೆಪ್ಟೆಂಬರ್​ 2) ಸರ್ಜಿಕಲ್​ ಚೇರ್​ ನೀಡಿದ್ದಾರೆ.

ಪರಪ್ಪನ ಅಗ್ರಹಾರದಲ್ಲಿ ದರ್ಶನ್​ ರಾಜಾತಿಥ್ಯ ಪಡೆದಿದ್ದರಿಂದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲಾಯಿತು. ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ಗಾಗಿಯೂ ದರ್ಶನ್​ ಅಂಗಲಾಚುವಂತಾಗಿದೆ. ವೈದ್ಯರು ನೀಡಿದ ಎರಡು ಪ್ರತ್ಯೇಕ ವರದಿಗಳನ್ನು ಪರಿಶೀಲನೆ ಮಾಡಲಾಗಿದೆ. ಆ ಬಳಿಕವೇ ನಟ ದರ್ಶನ್​ಗೆ ಸರ್ಜಿಕಲ್​ ಚೇರ್​ ನೀಡುವ ತೀರ್ಮಾನಕ್ಕೆ ಬರಲಾಗಿದೆ. ಇಂದು (ಸೆ.2) ಬಳ್ಳಾರಿ ಜೈಲಿನ ಅಧಿಕಾರಿಗಳು ಸರ್ಜಿಕಲ್​ ಚೇರ್​ ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us on