ಅಧಿಕಾರಿಗಳೊಂದಿಗೆ ಸಭೆ ನಡೆಸುವ ಸಂವಿಧಾನಿಕ ಅಧಿಕಾರ ಸುರ್ಜೇವಾಲಾಗಿಲ್ಲ: ರವಿಕುಮಾರ್, ಎಮ್ಮೆಲ್ಸಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 25, 2025 | 6:02 PM

ಆಳುವ ಪಕ್ಷದ ಜೊತೆ ಸಹಕರಿಸಿ, ಪಕ್ಷದ ನಾಯಕರ ಇಂಗಿತದಂತೆ ಕೆಲಸ ಮಾಡುವಂತೆ ಹೇಳಲು ಸುರ್ಜೇವಾಲಾ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿರಬಹುದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸಚಿವರೂ ಆಗಿರುವ ರಾಜಣ್ಣ ಅವರಿಗೆ ಸುರ್ಜೇವಾಲಾ ಮಾಡಿದ್ದು ಸರಿಕಂಡಿಲ್ಲವೆಂದರೆ ದೆಹಲಿ ಕಾಂಗ್ರೆಸ್ ನಾಯಕ ಮಾಡಿದ್ದು ಎಷ್ಟು ಅನಪೇಕ್ಷಣೀಯ ಅಂತ ಗೊತ್ತಾಗುತ್ತದೆ ಎಂದು ರವಿಕುಮಾರ್ ಹೇಳಿದರು.

ಬೆಂಗಳೂರು, ಜುಲೈ 25: ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅದ್ಯಾವ ಸಂವಿಧಾನಿಕ ಅರ್ಹತೆ ಮತ್ತು ಅಧಿಕಾರದಿಂದ ರಾಜ್ಯದ ಸರ್ಕಾರೀ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾರ್ಗದರ್ಶನ, ನಿರ್ದೇಶನ ನೀಡಿದರೋ ಗೊತ್ತಿಲ್ಲ, ಅದನ್ನು ಬಿಜೆಪಿ ಖಂಡಿಸುತ್ತದೆ ಎಂದು ಎಂಎಲ್​ಸಿ ಎನ್ ರವಿಕುಮಾರ್ (N Ravi Kumar, MLC) ಹೇಳಿದರು. ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಸುರ್ಜೇವಾಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವಿಷಯದಲ್ಲಿ ಸಚಿವ ಕೆಎನ್ ರಾಜಣ್ಣ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದನ್ನು ಮಾಧ್ಯಮಗಳಲ್ಲಿ ನೋಡಿದೆ, ಸುರ್ಜೇವಾಲಾ ತಮ್ಮ ಪಕ್ಷದ ಮಂತ್ರಿ ಮತ್ತು ಶಾಸಕರೊಂದಿಗೆ ಸಭೆ ನಡೆಸಲು ಮುಕ್ತರು, ಅದು ಅವರ ಪಕ್ಷಕ್ಕೆ ಸಂಬಂಧಿಸಿದ ವಿಷಯವಾಗುತ್ತದೆ, ಅದರೆ ಅಧಿಕಾರಿಗಳ ಮೇಲೆ ಅವರಿಗೆ ಯಾವ ಅಧಿಕಾರವೂ ಇಲ್ಲ ಎಂದು ರವಿಕುಮಾರ್ ಹೇಳಿದರು.

ಇದನ್ನೂ ಓದಿ:  ಸುರ್ಜೇವಾಲಾ ಬೆಂಗಳೂರಲ್ಲಿದ್ದ ಸಮಯ ಒಬ್ಬೇಒಬ್ಬ ಅಧಿಕಾರಿಯನ್ನು ಭೇಟಿಯಾಗಲಿಲ್ಲ: ಚಲುವರಾಯಸ್ವಾಮಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.