ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ

[lazy-load-videos-and-sticky-control id=”c2aRyg2fosw”] ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ. ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ […]

ಸೋಂಕಿತನ ತಾಯಿಗೆ ಇದೆಂಥಾ ದು:ಸ್ಥಿತಿ, 6 ತಾಸು ಕಳೆದ್ರೂ ನೆರವೇರಿಲ್ಲ ಅಂತ್ಯಕ್ರಿಯೆ
ಸಾಧು ಶ್ರೀನಾಥ್​

Updated on: Jul 13, 2020 | 9:42 AM

[lazy-load-videos-and-sticky-control id=”c2aRyg2fosw”]

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಿರೇನಗನೂರು ಗ್ರಾಮದಲ್ಲಿ ಅನಾರೋಗ್ಯದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿದ್ದು ಯಾರು ಕೂಡ ಅವರ ಅಂತ್ಯಕ್ರಿಯೆ ಮಾಡಿಲ್ಲ. ಏಕೆಂದರೆ ಮೃತ ವೃದ್ಧೆಯ ಮಗ ಕೊರೊನಾ ಸೋಂಕಿತನಾಗಿದ್ಧಾನೆ. ಈ ಕಾರಣದಿಂದಾಗಿ ವೃದ್ಧೆ ಸಾವನ್ನಪ್ಪಿ 6 ಗಂಟೆಯಾಗಿದ್ದರು ಯಾರೊಬ್ಬರು ಅಂತ್ಯಕ್ರಿಯೆ ಮಾಡಲು ಮುಂದಾಗದ ಮನಕಲುಕುವ ಘಟನೆಯೊಂದು ನಡೆದಿದೆ.

ಹೃದಯ ಸಂಬಂಧಿ ಕಾಯಿಲೆ ಇಂದ ಬಳಲುತಿದ್ದ ವೃದ್ದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಮೃತ ವೃದ್ದೆಯ ಮಗನಿಗ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಆತನನ್ನು ರಾಯಚೂರು ಒಪೆಕ್ ಆಸ್ಪತ್ರೆಯಲ್ಲಿ ಐಸೋಲೆಷನ್ ಮಾಡಲಾಗಿದೆ. ಸೋಂಕಿತನ ಮನೆ ಎನ್ನುವ ಕಾರಣಕ್ಕೆ ಮನೆಯನ್ನು ಸೀಲ್​ಡೌನ್ ಮಾಡಲಾಗಿದ್ದು, ಯಾರೊಬ್ಬರು ಶವ ಸಂಸ್ಕಾರಕ್ಕೆ ಮುಂದಾಗಿಲ್ಲ.


ಕಳೆದ ನಾಲ್ಕು ತಾಸುಗಳಿಂದ ವೃದ್ದೆಯ ಶವ ಅನಾಥವಾಗಿ ಬಿದ್ದಿದ್ದು, ಶವ ಸಂಸ್ಕಾರ ಮಾಡಲು ಯಾವ ಸಂಬಂಧಿಕರಾಗಲಿ ಹಾಗೂ ಅಧಿಕಾರಿಗಳಾಗಿ ಮುಂದೆ ಬಂದಿಲ್ಲ. ಹೀಗಾಗಿ ಗ್ರಾಮಸ್ಥರೆಲ್ಲ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಗ್ರಾಮಸ್ಥರು ನೀವೇ ಶವ ಸಂಸ್ಕಾರ ಮಾಡಿ ಅಥವಾ ಸಂಸ್ಕಾರ ಮಾಡಲು ನಮಗಾದರು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳೊಂದಿಗೆ ಮನವಿ ಮಾಡಿಕೊಂಡಿದ್ದಾರೆ.

Published On - 2:09 pm, Sun, 12 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us