AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ

ದಾವಣಗೆರೆ ಗೊಂದಲ ಸರಿಪಡಿಸದಿದ್ರೆ ‌ಮತ್ತೆ ಅನಾಹುತಗಳಾಗುತ್ತೆ: ಕೈಗೆ ಜಬ್ಬಾರ್ ಎಚ್ಚರಿಕೆ

ಪ್ರಸನ್ನ ಗಾಂವ್ಕರ್​
| Edited By: |

Updated on: May 06, 2026 | 4:38 PM

Share

ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ. 

ಬೆಂಗಳೂರು, (ಮೇ 06): ಸಾಕಷ್ಟು ಗೊಂದಲ, ಸವಾಲುಗಳ ನಡುವೆಯೂ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರವನ್ನು ಮರಳಿ ತೆಕ್ಕೆಗೆ ಪಡೆಯುವಲ್ಲಿ ಆಡಳಿತಾರೂಢ ಕಾಂಗ್ರೆಸ್​​ (Congress) ಯಶಸ್ವಿಯಾಗಿದೆ. ಆದರೂ ಅಸಮಾಧಾನ ಶಮನವಾಗುವ ಲಕ್ಷಣಗಳು ಕಾಣುತ್ತಿಲ್ಲ. ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ನಲ್ಲಿ ಸಾಕಷ್ಟು ಹೈಡ್ರಾಮಾಗಳು ನಡೆದಿದ್ದು, ಕೊನೆಗೆ ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನ ಪಕ್ಷದಿಂದ ಅಮಾನತು ಮಾಡಲಾಗಿದ್ದು, ಇದೀಗ ಅದನ್ನು ವಾಪಸ್ ಪಡೆಯುವಂತೆ ಕೆಲ ನಾಯಕರು ಸಲಹೆ ನೀಡಿದ್ದಾರೆ.

ಈ ಸಂಬಂಧ ಖುದ್ದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಪ್ರತಿಕ್ರಿಯಿಸಿದ್ದು, ಎಸ್ ಡಿ ಪಿಐ ಪಡೆದಿದ್ದು 100% ಕಾಂಗ್ರೆಸ್ ಮತಗಳು.ಶಾಮನೂರು ಇದ್ದಾಗಲೇ ನಾವು ಟಿಕೆಟ್ ಕೇಳಿದ್ದೆವು. ಅವರು ಇಲ್ಲದಾಗೂ ಟಿಕೆಟ್ ಕೇಳಿದ್ದೇವೆ. ಅದಕ್ಕೆ ಇಷ್ಟೆಲ್ಲಾ ಆಯ್ತು. ಮುಂದೆ ಎಲ್ಲ ಸರಿ ಹೋಗಬಹುದು. ಸರಿ ಮಾಡಲು ಅವಕಾಶ ಇದೆ. ತಪ್ಪು ಸರಿಪಡಿಸದೆ ಹೋದ್ರೆ ‌ಮತ್ತೆ ಅನಾಹುತಗಳಾಗುತ್ತೆ ಎಂದು ಕಾಂಗ್ರೆಸ್​​​​​​ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ನೋಡಿ: ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ

Follow Us