ಪಿಎಸ್​ಐ ಅನುಮಾನಾಸ್ಪದ ಸಾವು: ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್

| Updated By: ಗಂಗಾಧರ​ ಬ. ಸಾಬೋಜಿ

Updated on: Aug 03, 2024 | 11:08 PM

ಸಿದ್ದರಾಮಯ್ಯ ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ಪಿಎಸ್​ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್‌ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

ವಿಜಯಪುರ, ಆಗಸ್ಟ್​ 3: ಯಾದಗಿರಿ ಪಿಎಸ್​ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣ ವಿಚಾರವಾಗಿ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಸಿದ್ದರಾಮಯ್ಯ (Siddaramaiah) ಸರ್ಕಾರದಲ್ಲೇ ದಲಿತರ ಹತ್ಯೆಗಳು ಹೆಚ್ಚಾಗುತ್ತಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಅಧಿಕಾರಿ ಆತ್ಮಹತ್ಯೆಗೆ ಶರಣಾದ. ಈಗ ಪಿಎಸ್​​ಐ ಪರಶುರಾಮ ಮೃತಪಟ್ಟಿದ್ದಾನೆ. ಪಿಎಸ್​ಐ ಸಾವಿಗೆ ಕಾಂಗ್ರೆಸ್ ಶಾಸಕರ ಭ್ರಷ್ಟಾಚಾರವೇ ಕಾರಣ. ಪೊಲೀಸ್‌ ಅಧಿಕಾರಿಗಳೇ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ನೀಡಿದರೆ ಸಾಲದು. ಸಿಎಂ ರಾಜೀನಾಮೆ ಕೊಟ್ಟರೆ ಡಿಕೆ ಶಿವಕುಮಾರ್​ ಸಿಎಂ ಆಗಲು ಅನುಕೂಲವಾಗುತ್ತೆ. ಹಾಗಾಗಿ ವಿಧಾನಸಭೆಯನ್ನು ವಿಸರ್ಜನೆ ಮಾಡಬೇಕು.  ಮತ್ತೆ ಚುನಾವಣೆಗೆ ಹೋಗೋಣ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on