ರಾಮನಗರ: ಫಾರ್ ಎ ಚೇಂಜ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಸಿದ್ದರಾಮಯ್ಯ ಸರ್ಕಾರ (Siddaramaiah government) ಮತ್ತು ಅದು ಘೋಷಿಸಿದ 5 ಗ್ಯಾರಂಟಿಗಳ (5 Guarantees) ಪರ ಬ್ಯಾಟ್ ಮಾಡಿದ್ದಾರೆ. ತಮ್ಮ ಕ್ಷೇತ್ರ ಚನ್ನಪಟ್ಟಣದಲ್ಲಿ ಇಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತಾಡಿದ ಅವರು 5 ಗ್ಯಾರಂಟಿಗಳನ್ನು ಈಡೇರಿಸಲು ಹಣ ಹೊಂದಿಸಲು ಸಾಧ್ಯವಾಗದು ಅಂತ ಬಿಜೆಪಿ ಹೇಳುತ್ತಿರುವುದನ್ನು ಲೇವಡಿ ಮಾಡಿದರು. ಸರ್ಕಾರ ಮನಸ್ಸು ಮಾಡಿದರೆ, ಗ್ಯಾರಂಟಿಗಳಿಗೆ ಹಣ ಹೊಂದಿಸುವುದು ಕಷ್ಟವಾಗಲಾರದು, ಅದಕ್ಕೆ ಹಲವು ಮಾರ್ಗೋಪಾಯಗಳಿವೆ ಎಂದು ಕುಮಾರಸ್ವಾಮಿ ಹೇಳಿದರು. ತಾವು ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಅನುಭವದ ಹಿನ್ನೆಲೆಯಲ್ಲಿ ಇದನ್ನು ಹೇಳಿತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.