AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ ಖರ್ಗೆ ಗರಂ

ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ ಖರ್ಗೆ ಗರಂ

ರಮೇಶ್ ಬಿ. ಜವಳಗೇರಾ
|

Updated on: Sep 14, 2026 | 3:06 PM

Share

ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎನ್ನುವ ಟಿ.ನರಸೀಪುರ ಇನ್ಸ್​​​ಪೆಕ್ಟರ್ ಧನಂಜಯ್ ದರ್ಪದ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್​​ಪೆಕ್ಟರ್​​ ಧನಂಜಯ್​​ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕ್ರಮ ಬಗ್ಗೆ ನೋಡೋಣ, ಬಿಜೆಪಿಯವರನ್ನು ಕೇಳಿ ಮಾಡಲು ಆಗಲ್ಲ. ಬಿಜೆಪಿಯವರು ಹೇಳಿದಂತೆ ನಾವು ಆಡಳಿತ, ಕೇಳುವುದಕ್ಕೆ ಆಗಲ್ಲ. ಅಶೋಕ್ ಗೃಹ ಸಚಿವರಿದ್ದಾಗ ಸಭೆ ಮಾಡಿಲ್ವಾ, ಸೂಚನೆ ಕೊಟ್ಟಿಲ್ವಾ? ಅಶೋಕ್​ ಇದ್ದಾಗ ಏನು ನಿಯಮ ಇತ್ತೋ ಈಗಲೂ ಅದೇ ನಿಯಮ. ಮೈಸೂರಿನ ನಿರುದ್ಯೋಗಿ ರಾಜಕಾರಣಿಗೆ ಕೆಲಸ ಇಲ್ಲ.

ಬೆಂಗಳೂರು, (ಸೆಪ್ಟೆಂಬರ್ 14): ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎನ್ನುವ ಟಿ.ನರಸೀಪುರ ಇನ್ಸ್​​​ಪೆಕ್ಟರ್ ಧನಂಜಯ್ ದರ್ಪದ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್​​ಪೆಕ್ಟರ್​​ ಧನಂಜಯ್​​ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕ್ರಮ ಬಗ್ಗೆ ನೋಡೋಣ, ಬಿಜೆಪಿಯವರನ್ನು ಕೇಳಿ ಮಾಡಲು ಆಗಲ್ಲ. ಬಿಜೆಪಿಯವರು ಹೇಳಿದಂತೆ ನಾವು ಆಡಳಿತ, ಕೇಳುವುದಕ್ಕೆ ಆಗಲ್ಲ. ಅಶೋಕ್ ಗೃಹ ಸಚಿವರಿದ್ದಾಗ ಸಭೆ ಮಾಡಿಲ್ವಾ, ಸೂಚನೆ ಕೊಟ್ಟಿಲ್ವಾ? ಅಶೋಕ್​ ಇದ್ದಾಗ ಏನು ನಿಯಮ ಇತ್ತೋ ಈಗಲೂ ಅದೇ ನಿಯಮ. ಮೈಸೂರಿನ ನಿರುದ್ಯೋಗಿ ರಾಜಕಾರಣಿಗೆ ಕೆಲಸ ಇಲ್ಲ. ಪೊಲೀಸ್​ ಸ್ಟೇಷನ್​ಗೆ ನುಗ್ಗುತ್ತೇನೆ ಅಂತಾರಲ್ಲ, ಸರಿನಾ? ಇವರ ಸರ್ಕಾರದಲ್ಲಿ ಠಾಣೆಗೆ ನುಗ್ತೀನಿ ಅಂದ್ರೆ ಸುಮ್ಮನಿರುತ್ತೀರಾ? ಎಸ್‌ಪಿ ವರದಿ ಕೊಡಲಿ, ವರದಿ ನೋಡಿ ತೀರ್ಮಾನ ಮಾಡುತ್ತೇವೆ. ಬಿಜೆಪಿಯವರು ಅಮಾನತು ಮಾಡಿ ಅಂದ್ರೆ ಮಾಡಿಬಿಡಬೇಕಾ? ಎಂದು ಪ್ರಶ್ನಿಸಿದರು. ಈ ಮೂಲಕ ಇನ್ಸ್​​ಪೆಕ್ಟರ್​​​ ಧನಂಜಯ್​​ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us